More

    ಕಿರುತೆರೆ ನಟಿ ಸವಿ ಮಾದಪ್ಪ ಸಾವಿನ ಪ್ರಕರಣ: ಪಿಎ ಮಹೇಶ್​ನನ್ನು ವಶಕ್ಕೆ ಪಡೆದ ಪೊಲೀಸರು

    ರಾಮನಗರ: ಕಿರುತೆರೆ ನಟಿ ಸೌಜನ್ಯ ಅಲಿಯಾಸ್​ ಸವಿ ಮಾದಪ್ಪ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮೇಕಪ್ ಮ್ಯಾನ್, ಪಿಎ ಮಹೇಶ್​ನನ್ನ ಕುಂಬಳಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸೌಜನ್ಯ ತಂದೆ ದೂರಿನನ್ವಯ ವಶಕ್ಕೆ ಪಡೆದಿರುವ ಪೊಲೀಸರು ಮಹೇಶ್​ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸೌಜನ್ಯಾಳ ಪ್ರತಿ ಚಲನವಲನದ ಬಗ್ಗೆ ಮಹೇಶ್​ಗೆ ಮಾಹಿತಿ ಇತ್ತು. ಆಕೆಯ ಕೆಲಸದ ವಿಚಾರ ಹಾಗೂ ಬ್ಯಾಂಕ್ ವ್ಯವಹಾರದ ಬಗ್ಗೆ ಮಹೇಶ್​ಗೆ ಇಂಚಿಂಚು ತಿಳಿದಿತ್ತು ಎನ್ನಲಾಗಿದೆ.

    ಸದ್ಯ ಮಹೇಶ್​ನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕಿರುತೆರೆ ನಟ ವಿವೇಕ್​ ಮೇಲೆಯೂ ಸೌಜನ್ಯ ತಂದೆ ಪ್ರಭು ಮಾದಪ್ಪ ದೂರು ನೀಡಿದ್ದು, ಆತನನ್ನು ಪೊಲೀಸರು ವಶಕ್ಕೆ ನಡೆಸಲಿದ್ದಾರೆ. ನಿನ್ನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಸೌಜನ್ಯ ಶವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

    ಮಗಳ ಸಾವಿನ ಸುದ್ದಿ ತಿಳಿದ ಬೆನ್ನಲ್ಲೇ ಸೌಜನ್ಯ ತಂದೆ ಪ್ರಭು ಮಾದಪ್ಪ ನಟ ವಿವೇಕ್​ ಮತ್ತು ಪಿಎ ಮಹೇಶ್​ ವಿರುದ್ಧ ಕುಂಬಳಗೂಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಬೆದರಿಕೆ ಕರೆ ಬೆನ್ನಲ್ಲೇ ಸಾವಿನ ಸುದ್ದಿಯು ಬಂತು: ನಟಿಯ ತಂದೆಯ ದೂರಿನಲ್ಲಿ ಸ್ಪೋಟಕ ಮಾಹಿತಿ ಬಯಲು

    ಮಗಳ ಸಾವಿಗೆ ಆ ನಟನೇ ಕಾರಣ: ಆತ್ಮಹತ್ಯೆ ಮಾಡಿಕೊಂಡ ನಟಿಯ ತಂದೆಯ ಆರೋಪ, ಪೊಲೀಸರಿಗೆ ದೂರು..

    ಡೆತ್​ನೋಟ್​ ಬರೆದಿಟ್ಟು ಬೆಂಗಳೂರು ಸಮೀಪ ಕಿರುತೆರೆ ನಟಿ ಸವಿ ಮಾದಪ್ಪ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts