ಹೈದರಾಬಾದ್: ಇಂದಿನ ದಿನಗಳಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಸರ್ಕಾರಿ ಕೆಲಸದಲ್ಲಿರುವವರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿಲ್ಲ. ಜನಪ್ರತಿನಿಧಿಗಳು ಕೂಡ ಇದಕ್ಕೆ ಹೊರತಾಗಿಲ್ಲ. ಹಣ ಖರ್ಚಾದರೂ ಪರವಾಗಿಲ್ಲ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲಾ-ಕಾಲೇಜಿಗೆ ಸೇರಿಸುತ್ತಾರೆ. ಶಿಕ್ಷಣದ ಅಡಿಪಾಯ ಚೆನ್ನಾಗಿರಬೇಕೆಂಬ ಉದ್ದೇಶದಿಂದ ಮಕ್ಕಳನ್ನು ಆರಂಭದಲ್ಲೇ ಎಲ್ಕೆಜಿ-ಯುಕೆಜಿಗೆ ದಾಖಲು ಮಾಡುತ್ತಾರೆ. ಸರ್ಕಾರಿ ಶಾಲೆ-ಕಾಲೇಜುಗಳು ಬಡ ಮಕ್ಕಳಿಗೆ ಮಾತ್ರ ಎನ್ನುವ ಪರಿಸ್ಥಿತಿ ನಿರ್ಮಣವಾಗಿದೆ. ಆದರೆ, ಇಲ್ಲೊಬ್ಬ ಜಿಲ್ಲಾಧಿಕಾರಿ ತಮ್ಮ ಇಬ್ಬರು ಮಕ್ಕಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿ ಆಗಿದ್ದಾರೆ.
ತೆಲಂಗಾಣದ ಕುಮಾರಭೀಮ ಆಸಿಫಬಾದ್ ಜಿಲ್ಲಾಧಿಕಾರಿ ರಾಹುಲ್ ರಾಜ್ ಅವರಿಗೆ ನಿರ್ವಿಕಾರಾಜ್ ಹಾಗೂ ರಿತ್ವಿಕಾರಾಜ್ ಎಂಬ ಇಬ್ಬರು ಮಕ್ಕಳಿದ್ದು, ಇಬ್ಬರನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಜನಕಪುರ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿದ್ದು, ಇಬ್ಬರು ಮಕ್ಕಳು ಕೂಡ ಇನ್ನಿತರ ಮಕ್ಕಳ ಜತೆ ಸಂತೋಷವಾಗಿ ಆಟವಾಡುತ್ತಾ ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಗನವಾಡಿ ಶಿಕ್ಷಕಿ ಅರುಣಾ, ಅಂಗನವಾಡಿಯಲ್ಲಿ ತಯಾರಿಸುವ ಊಟವನ್ನೇ ಜಿಲ್ಲಾಧಿಕಾರಿ ಮಕ್ಕಳು ಸಹ ಸೇವಿಸುತ್ತಾರೆ. ಎಲ್ಲರೊಂದಿಗೆ ಹೊಂದಿಕೊಂಡಿದ್ದಾರೆಂದು ತಿಳಿಸಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ರೀತಿಯ ಎಲ್ಲ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಅಂಗನವಾಡಿ ಮತ್ತು ಶಾಲೆಗೆ ಸೇರಿಸಿದರೆ, ಅಭಿವೃದ್ಧಿಯಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. (ಏಜೆನ್ಸೀಸ್)
ಚಂದ್ರಬಾಬು ನಾಯ್ಡು ಕಣ್ಣೀರು: ಬ್ಲೂ ಫಿಲ್ಮ್ ಸಿಡಿ ನೆನಪಿಸಿ ಬೈ ಬೈ ಬಾಬು ಎಂದ ಶಾಸಕಿ ರೋಜಾ!
ಜಾಲತಾಣದಲ್ಲಿ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಬೆದರಿಕೆ ಕರೆಗಳು ಬರುತ್ತಿವೆ ಎಂದ ನಾಯಕಿ
ಬಾಲಕಿ ಮೇಲೆ ಕಳ್ಳತನ ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್ಗೆ ಹೈಕೋರ್ಟ್ ಶಾಕ್!