ಹುಬ್ಬಳ್ಳಿ: ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸುವ ಮೂಲಕ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.
ಕಾಂಗ್ರೆಸ್ನಲ್ಲಿ ಸದ್ಯ ಸಿದ್ದು ಮತ್ತು ಡಿ.ಕೆ. ಶಿವಕುಮಾರ್ ಎಂಬ ಎರಡು ಬಣ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ, ಹುಟ್ಟುಹಬ್ಬ ಆಚರಣೆ ವೇಳೆ ಮನಸ್ತಾಪಗಳನ್ನು ಬದಿಗಿಟ್ಟು ಪರಸ್ಪರ ಕೇಕ್ ತಿನ್ನಿಸಿ ಸಂಭ್ರಮಿಸುವ ಮೂಲಕ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರುವ ಪ್ರಯತ್ನ ಮಾಡಿದರು.
ಡಿಕೆಶಿ ಮಾತ್ರವಲ್ಲದೆ, ಕೆ.ಜೆ. ಜಾರ್ಜ್ ಮತ್ತು ಆರ್.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ನೆಚ್ಚಿನ ನಾಯಕನಿಗೆ ಕೇಕ್ ತಿನ್ನಿಸಿ ಶುಭಕೋರಿದರು.
ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲು ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಆದರೆ, ಸಿದ್ದರಾಮೋತ್ಸವಕ್ಕೆ ಮಳೆ ಭೀತಿ ಎದುರಾಗಿದೆ. (ದಿಗ್ವಿಜಯ ನ್ಯೂಸ್)
ಕಾರಣ ನಾನೊಬ್ಬನೇ!; ಪೆಟ್ರೋಮ್ಯಾಕ್ಸ್ ಸೋಲಿಗೆ ಕ್ಷಮೆ ಕೇಳಿದ ವಿಜಯಪ್ರಸಾದ್