ಹೈದರಾಬಾದ್: ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಹುಲಿ ವಿಶ್ವನಾಥ ಸಜ್ಜನರ್ ಅವರನ್ನು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.
ಹೈದರಾಬಾದ್ ಪಶ್ಚಿಮ ವಲಯದ ಐಜಿಪಿ ಸ್ಟೆಫೆನ್ ರವೀಂದ್ರ ಅವರನ್ನು ನೂತನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ತೆಲಂಗಾಣ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ರವೀಂದ್ರ ಅವರು ಈ ಹಿಂದೆ ಹೈದರಾಬಾದ್ನಲ್ಲಿ ಡಿಸಿಪಿ ಆಗಿಯು ಕಾರ್ಯನಿರ್ವಹಿಸಿದ್ದಾರೆ.
ಸಜ್ಜನರ್ ಅವರು 2019ರಲ್ಲಿ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಸಜ್ಜನರ್ ಅವರನ್ನು ವರ್ಗಾವಣೆ ಮಾಡಿರುವುದು ಎಲ್ಲರಿಗೂ ಅಚ್ಚರಿಯಾಗಿದೆ.
ಸೈಬರಾಬಾದ್ನ ಆಯುಕ್ತರಾಗಿ ತಮ್ಮ ಇನ್ನಿಂಗ್ಸ್ನಲ್ಲಿ, ಸಜ್ಜನರ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮಾತ್ರವಲ್ಲದೆ ಹಲವಾರು ಸೇವಾ ಕಾರ್ಯಕ್ರಮಗಳನ್ನು ಕೈಗೊಂಡರು. ಸೈಬರಾಬಾದ್ ಪೊಲೀಸ್ ಕಮೀಷನರೇಟ್ನಲ್ಲಿ ಹಲವಾರು ಸುಧಾರಣೆಗಳನ್ನು ಪ್ರಾರಂಭಿಸಿದರು ಮತ್ತು ಕೋವಿಡ್ -19 ಮೊದಲ ಅಲೆಯ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದರು.
ಹೈದರಾಬಾದ್ನ ಪಶುವೈದ್ಯೆಯನ್ನು ಹತ್ಯೆ ಮಾಡಿದವರನ್ನು ಎನ್ಕೌಂಟರ್ ಮಾಡಿದ ಪ್ರಕರಣದಲ್ಲಿ ವಿಶ್ವನಾಥ್ ಸಜ್ಜನರ್ ಭಾರಿ ಸುದ್ದಿಯಾದರು. ಅವರ ಸಾಹಸವನ್ನು ರಾಷ್ಟ್ರದೆಲ್ಲೆಡೆ ಜನರು ಶ್ಲಾಘಿಸಿದರು. ವಿಶ್ವನಾಥ್ ಅವರು ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು. (ಏಜೆನ್ಸೀಸ್)
ಎಲೆಕ್ಟ್ರಾನಿಕ್ಸ್ ಚಿಪ್ ಅಳವಡಿಸಿ ಗ್ರಾಹಕರಿಗೆ ಮೋಸವೆಸಗುತ್ತಿದ್ದ 33 ಪೆಟ್ರೋಲ್ ಬಂಕ್ಸ್ ಸೀಜ್!
‘ಸಜ್ಜನರ’ ಕೆಲಸ ಎಂದರೆ ಇದು.. ಬಾಂಗ್ಲಾ ಟು ಹೈದರಾಬಾದ್, ಆ ರಾತ್ರಿ ಏನಾಯ್ತು?