ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್​ ಕೋರ್ಟ್​ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ. ಧಾರವಾಡಕ್ಕೆ ಭೇಟಿ ನೀಡದಂತೆ ಕುಲಕರ್ಣಿಗೆ ಉನ್ನತ ನ್ಯಾಯಾಲಯ ಆದೇಶಿಸಿದೆ. ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದಕ್ಕೆ ವಿನಯ್​ ಕುಲಕರ್ಣಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಆದರೆ, ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತು. … Continue reading ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು