ಪಟನಾ: ಬಿಹಾರದಲ್ಲಿ ಅಚ್ಚರಿಯ ಮೇಲೆ ಅಚ್ಚರಿಯ ಘಟನೆಗಳು ನಡೆಯುತ್ತಿದೆ. ನಿನ್ನೆ ಬಿಹಾರದ ನಿವಾಸಿಯೊಬ್ಬ ತನ್ನ ಖಾತೆಗೆ ತಪ್ಪಾಗಿ ಜಮಾ ಆದ ಐದೂವರೆ ಲಕ್ಷ ರೂಪಾಯಿಗಳನ್ನು ಬ್ಯಾಂಕಿಗೆ ಹಿಂದುರುಗಿಸಲು ನಿರಾಕರಿಸಿದ್ದ. ಆ ಹಣವನ್ನು ಪ್ರಧಾನಿ ಮೋದಿ ತನಗೆ ಕಳುಹಿಸಿದ್ದಾರೆಂದು ಭಾವಿಸಿ, ಪೂರ್ಣವಾಗಿ ಖರ್ಚು ಮಾಡಿಬಿಟ್ಟಿರುವುದಾಗಿ ಹೇಳಿದ್ದಾನೆ. ಇದೀಗ ಅದೇ ರೀತಿಯ ಮತ್ತೊಂದು ಘಟನೆ ಬಿಹಾರದಿಂದಲೇ ವರದಿಯಾಗಿದೆ. ಆದರೆ, ಈ ಬಾರಿ ಜಮಾ ಆಗಿರುವ ಮೊತ್ತ ಕೇಳಿದ್ರೆ ತಲೆ ತಿರುಗುವುದು ಗ್ಯಾರೆಂಟಿ.
ಬಿಹಾರದ ಕತಿಹಾರ್ ಜಿಲ್ಲೆಯ ಇಬ್ಬರು ಶಾಲಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಬರೋಬ್ಬರಿ 900 ಕೋಟಿ ರೂಪಾಯಿಗೂ ಅಧಿಕ ಹಣ ಜಮೆ ಆಗಿದೆ. ಮನೆ ಕತಿಹಾರ್ ಬ್ಯಾಂಕಿನಲ್ಲಿ ಈ ಘಟನೆ ನಡೆದಿದೆ. ಈ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಘಟನೆಯಿಂದ ಇಡೀ ಗ್ರಾಮವೇ ಹುಬ್ಬೇರಿಸಿದ್ದು, ನಮಗೂ ಹಣ ಬಂದಿರಬಹುದು ಅಂದುಕೊಂಡು ತಮ್ಮ ತಮ್ಮ ಖಾತೆಗಳನ್ನು ಜನರು ಪರಿಶೀಲನೆ ಮಾಡಿಕೊಳ್ಳುತ್ತಿದ್ದಾರೆ.
ಶಾಲಾ ಸಮವಸ್ತ್ರದ ಹಣವನ್ನು ಸರ್ಕಾರ ಬ್ಯಾಂಕ್ ಖಾತೆಗೆ ಜಮಾ ಮಾಡಿದೆಯೇ ಎಂಬುದನ್ನು ತಿಳಿಯಲು ಇಬ್ಬರು ವಿದ್ಯಾರ್ಥಿಗಳು ಎಸ್ಬಿಐನ ಸ್ಥಳೀಯ ಸಿಪಿಸಿ (ಸೆಂಟ್ರಲೈಸ್ಡ್ ಪ್ರೊಸೆಸಿಂಗ್ ಸೆಂಟರ್) ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಬ್ಯಾಂಕ್ ಖಾತೆಯ ಹಣವನ್ನು ಪರಿಶೀಲಿಸಿದಾಗ ಇಬ್ಬರ ಖಾತೆಯಲ್ಲಿ ಬರೋಬ್ಬರಿ 900 ಕೋಟಿ ರೂ. ಹಣ ಇರುವುದನ್ನು ನೋಡಿ ಎಲ್ಲರು ಶಾಕ್ ಆಗಿದ್ದಾರೆ.
ವಿದ್ಯಾರ್ಥಿಗಳಾದ ಗುರುಚಂದ್ರ ವಿಶ್ವಾಸ್ ಮತ್ತು ಅಸಿತ್ ಕುಮಾರ್ ಎಂಬುವರ ಖಾತೆಗೆ 900 ಕೋಟಿ ರೂ. ಜಮೆ ಆಗಿದೆ. ಇಬ್ಬರು ಕೂಡ ಅಜಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪಾಸ್ತಿಯಾ ಗ್ರಾಮದ ನಿವಾಸಿಗಳು. ಗುರುಚಂದ್ರ ಅಕೌಂಟ್ ನಂಬರ್ಗೆ 60 ಕೋಟಿ ರೂಪಾಯಿಗೂ ಅಧಿಕ ಮೊತ್ತ ಜಮೆ ಆಗಿದ್ದರೆ, ಅಸಿತ್ ಕುಮಾರ್ ಅಕೌಂಟ್ ನಂಬರ್ಗೆ 900 ಕೋಟಿ ರೂ.ಗೂ ಅಧಿಕ ಮೊತ್ತ ಜಮೆಯಾಗಿದೆ. ಇಬ್ಬರು ಭೆಲಗಂಜ್ ಶಾಖೆಯ ಉತ್ತರ ಬಿಹಾರ್ ಗ್ರಾಮೀಣ ಬ್ಯಾಂಕಿನಲ್ಲಿ ಅಕೌಂಟ್ ಹೊಂದಿದ್ದಾರೆ.
ಈ ಬೆಳವಣಿಗೆಯಿಂದಾಗಿ ಬ್ಯಾಂಕ್ ಮ್ಯಾನೇಜರ್ ಮನೋಜ್ ಗುಪ್ತಾ ಅವರು ಎರಡೂ ಮಕ್ಕಳ ಖಾತೆಯಿಂದ ಹಣ ಪಾವತಿಯನ್ನು ನಿಲ್ಲಿಸಿದ್ದಾರೆ ಮತ್ತು ಈ ವಿಷಯವು ತನಿಖೆಯಲ್ಲಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)
ಬ್ಯಾಂಕ್ ಖಾತೆಗೆ ತಪ್ಪಾಗಿ ಬಂದ ಲಕ್ಷಗಟ್ಟಲೇ ಹಣ… ಪ್ರಧಾನಿ ಮೋದಿ ಕಳ್ಸಿರೋದು ಎಂದ ಖಾತೆದಾರ!
ತನ್ನ ವಿಡಿಯೋದಿಂದ ಸಸ್ಪೆಂಡ್ ಆಗಿ, ಸರ್ಕಾರಿ ಕೆಲ್ಸಕ್ಕೆ ಗುಡ್ ಬೈ ಹೇಳಿದ ಲೇಡಿ ಪೇದೆಗೆ ಬಂತು ಬಂಪರ್ ಆಫರ್!
6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾಮುಕ ಆತ್ಮಹತ್ಯೆಗೆ ಶರಣು: ರೈಲ್ವೆ ಹಳಿ ಮೇಲೆ ಶವ ಪತ್ತೆ