More

    ರಸ್ತೆಯಲ್ಲಿ ಉಗುಳಿದ್ದಕ್ಕೆ ಸರ್ಕಾರಿ ಬಸ್​ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್​ ಕಾನ್ಸ್​ಟೇಬಲ್​

    ಚೆನ್ನೈ: ರಸ್ತೆಯಲ್ಲಿ ಉಗುಳಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಪೊಲೀಸ್​ ಕಾನ್ಸ್​ಟೇಬಲ್​ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

    ಹಲ್ಲೆಗೊಳಗಾದ ವ್ಯಕ್ತಿಯನ್ನು ಜಯಚಂದ್ರನ್​ ಎಂದು ಗುರುತಿಸಲಾಗಿದೆ. ತುಟಿ ಕಿತ್ತು ಹೋಗಿದ್ದು, ಗಲ್ಲದಲ್ಲಿ ಗಾಯಗಳಾಗಿವೆ. ಸಂತ್ರಸ್ತ ಜಯಚಂದ್ರನ್​ ಸರ್ಕಾರಿ ಬಸ್​ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನ್ಸ್​ಟೇಬಲ್​ ಲೂಯಿಸ್​ ಹಲ್ಲೆ ಮಾಡಿದರೆಂದು ಆರೋಪ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್​ ಆಗಿದೆ. ವೈರಲ್ ವಿಡಿಯೋದಲ್ಲಿ, ಪೊಲೀಸರು ಜಯಚಂದ್ರನನ್ನು ಮಾತನಾಡದಂತೆ ತಡೆಯಲು ಪ್ರಯತ್ನಿಸುತ್ತಿರುವುದು ಮತ್ತು ಘಟನೆಯ ಸ್ಥಳದಿಂದ ಅವರನ್ನು ಕರೆದೊಯ್ಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ರಸ್ತೆಯಲ್ಲಿ ಉಗುಳಿದ್ದಕ್ಕೆ ಸುಮಾರು ಒಂದು ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಜಯಚಂದ್ರನ್​ ಆರೋಪ ಮಾಡಿದ್ದಾರೆ.

    ಆದರೆ, ಜಯಚಂದ್ರನ್​ ಮಾಡಿದ ಆರೋಪವನ್ನು ಕಾನ್ಸ್​ಟೇಬಲ್​ ನಿಕಾರಿಸಿದ್ದಾರೆ. ಅಲ್ಲದೆ, ಆತ ಉಗುಳಿದ್ದು ರಸ್ತೆಯ ಮೇಲಲ್ಲ, ನನ್ನ ಮೇಲೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

    ವೈರಲ್​ ಆಗಿರುವ ವಿಡಿಯೋದಲ್ಲಿ ಕಾನ್ಸ್​ಟೇಬಲ್​ ಲೂಯಿಸ್, ಸಂತ್ರಸ್ತನಿಗೆ ಬೆದರಿಕೆ ಹಾಕುತ್ತಿರುವುದು ಸೆರೆಯಾಗಿದೆ. ಈ ವೇಳೆ ಮಧ್ಯಪ್ರವೇಶಿಸಿದ ಸ್ಥಳೀಯ ನಿವಾಸಿಗಳು ಪೊಲೀಸರನ್ನು ಪ್ರಶ್ನಿಸಿದರು. ಇದಾದ ಬಳಿಕ ಪೊಲೀಸರು ಗುಂಪನ್ನು ಚದುರಿಸಿದರು. ಈ ಸಂಬಂಧ ದೂರು ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. (ಏಜೆನ್ಸೀಸ್​)

    ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!

    ರೈಲು ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಬಿದ್ದ ಯುವತಿ: ಬಾಯ್​ಫ್ರೆಂಡ್​ ಜತೆಗಿನ ವೀಕೆಂಡ್​ ಮೋಜು ದುರಂತ ಅಂತ್ಯ

    ಇನ್ನೊಂದಿಷ್ಟು ಇಲ್ಲಿವೆ…ಮತ್ತಷ್ಟು ಹಾಟ್​ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಸವಾಲೆಸೆದ ಇರಾ ಖಾನ್​!

    ಮೇ 18 ರಿಂದ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ, ಮಲೆನಾಡಲ್ಲಿ ಆರೆಂಜ್ ಅಲರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts