ಶ್ರೀನಗರ: ಪೊಲೀಸ್ ಬಸ್ ಗುರಿಯಾಗಿರಿಸಿಕೊಂಡು ಉಗ್ರರಿಬ್ಬರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಹೊರವಲಯದ ಜೆವಾನ್ ಬಳಿಯಿರುವ ಪೊಲೀಸ್ ಕ್ಯಾಂಪ್ನಲ್ಲಿ ನಡೆದಿದೆ.
ವಿವಿಧ ರಕ್ಷಣಾ ಪಡೆಗಳು ನೆಲೆಸಿದ್ದ ಕ್ಯಾಂಪ್ಗಳಿಂದಲೇ ಕೂಡಿರುವ ಹೆಚ್ಚು ಸುರಕ್ಷಿತ ಪ್ರದೇಶದಲ್ಲಿ ನಿಂತಿದ್ದ ಬಸ್ ಮೇಲೆಯೇ ಉಗ್ರರು ದಾಳಿ ನಡೆಸಿದ್ದಾರೆ. ಪಾಟ್ನಾ ಚೌಕ್ ಸಮೀಪವೇ ಘಟನೆ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸದ್ಯ ಉಗ್ರರ ಹುಡುಕಾಟಕ್ಕಾಗಿ ಘಟನೆ ನಡೆದ ಪ್ರದೇಶವನ್ನು ಸೇನಾ ಪಡೆಗಳು ಸುತ್ತುವರಿದಿದ್ದು, ಉಗ್ರರನ್ನು ಮಟ್ಟ ಹಾಕಲು ತೀವ್ರ ಶೋಧ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಘಟನೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಅಲ್ಲದೆ, ದಾಳಿಯಲ್ಲಿ ಹುತಾತ್ಮರಾದ ಪೊಲೀಸರಿಗೆ ಪ್ರಧಾನಿ ಮೋದಿ ಸೂಚಿಸಿದ್ದು, ಗಾಯಗಳುಗಳು ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ. (ಏಜೆನ್ಸೀಸ್)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಸಾಂಸ್ಕೃತಿಕ-ಆಧ್ಯಾತ್ಮಿಕ ಜಾಗೃತಿ
ಹೊಸ ಕಾಶಿ, ದೇಶಕ್ಕೆ ಹೊಸ ದಿಶೆ: ಸ್ವಚ್ಛತೆ, ಸೃಜನೆ-ನವೋನ್ವೇಷಣೆ, ಸ್ವಾವಲಂಬಿ ಭಾರತ