ತುಮಕೂರು: ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ಮೂಲದ ನಿವಾಸಿಯಾಗಿರುವ ಶಿವಕುಮಾರ್ ಕಳೆದ ಒಂದೂವರೆ ವರ್ಷದಿಂದ ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಎಸ್ಪಿ ಕಚೇರಿಯ ಹಿಂಭಾಗದ ಪೊಲೀಸ್ ಕ್ವಾಟ್ರಸ್ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳು ಶಿವಕುಮಾರ್ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.
ಅಂದಹಾಗೆ ಶಿವಕುಮಾರ್ ಅವರು 1994ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. (ದಿಗ್ವಿಜಯ ನ್ಯೂಸ್)
ಹಿಂದು ಎಂಬ ಕಾರಣಕ್ಕೆ ಅಫ್ರಿದಿ ಕೊಟ್ಟ ಕಿರುಕುಳದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪಾಕ್ ಮಾಜಿ ಆಟಗಾರ ಕನೇರಿಯಾ!
ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ
9ನೇ ಪಂದ್ಯದಲ್ಲಾದರೂ ಗೆದ್ದೀತೇ ಮುಂಬೈ? ಇಂದು ರಾಜಸ್ಥಾನ ರಾಯಲ್ಸ್ ಎದುರಾಳಿ