ತುಮಕೂರು: ಸೊಸೆ ಮೇಲಿನ ಕೋಪಕ್ಕೆ ಏನು ಅರಿಯದ 2 ವರ್ಷದ ಪುಟಾಣಿ ಮೊಮ್ಮಗಳನ್ನು ಅತ್ತೆ ಬಲಿ ಪಡೆದಿರುವ ಅಮಾನವೀಯ ಘಟನೆ ಕುಣಿಗಲ್ ತಾಲ್ಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.
ತ್ರಿಷಾ ಮೃತಪಟ್ಟ ಮಗು. ಹುಚ್ಚು ನಾಯಿ ಕಡಿತಕ್ಕೆ ಒಳಗಾದ 1 ತಿಂಗಳು 10 ದಿನದ ನಂತರ ಮಗು ಮೃತಪಟ್ಟಿದೆ. ಆರೋಪಿ ಜಯಮ್ಮ, ಹಸು ಮೇಯಿಸಲು ಹೊಲದ ಬಳಿ ಹೋಗುವಾಗ ತನ್ನ ಜತೆ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹುಚ್ಚು ನಾಯಿಯೊಂದು ಹಸು ಹಾಗೂ ಮಗುವಿಗೆ ಕಚ್ಚಿತ್ತು. ಆದರೆ, ಸೊಸೆ ಮೇಲಿನ ಕೋಪದಿಂದ ಈ ವಿಚಾರವನ್ನು ಯಾರಿಗೂ ಹೇಳದೆ ಜಯಮ್ಮ ಮುಚ್ಚಿಟ್ಟಿದ್ದರು.
ಹುಚ್ಚು ನಾಯಿ ಕಡಿದ ಮೂರೇ ದಿನಕ್ಕೆ ಹಸು ಮೃತಪಟ್ಟಿತ್ತು. ಕಳೆದ ಒಂದು ವಾರದ ಹಿಂದೆ ಮಗು ತ್ರಿಷಾ ರಕ್ತ ವಾಂತಿ ಮಾಡಿಕೊಂಡಿತ್ತು. ಈ ವೇಳೆ ಪಾಲಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿಗೆ ಯಾವುದೋ ಬೆಕ್ಕು, ಇಲ್ಲ ನಾಯಿ ಕಚ್ಚಿರುವ ಬಗ್ಗೆ ವೈದ್ಯರು ಶಂಕೆ ವ್ಯಕ್ತಪಡಿಸಿದ್ದರು. ಮಗು ಗಂಭೀರ ಸ್ಥಿತಿ ತಲುಪಿದ ಬಳಿಕ ಜಯಮ್ಮ ಹುಚ್ಚು ನಾಯಿ ಕಡಿದ ಬಗ್ಗೆ ಬಾಯ್ಬಿಟ್ಟರು.
ಘಟನೆ ನಡೆದು 1 ತಿಂಗಳು 10 ದಿನಗಳ ಬಳಿಕ ಎಲ್ಲ ವಿಚಾರವನ್ನು ಜಯಮ್ಮ ತಿಳಿಸಿದರು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ಮಗ ಪುಟ್ಟರಾಜುವಿಗೆ 2 ವರ್ಷದ ಹಿಂದೆ ಚಿಕ್ಕಮ್ಮ ಎಂಬ ಮಹಿಳೆಯ ಜತೆ ವಿವಾಹವಾಗಿತ್ತು. ಆದರೆ, ಮಗನ ವಿವಾಹದ ಬಗ್ಗೆ ಜಯಮ್ಮ ಅಸಮಧಾನ ಹೊಂದಿದ್ದಳು. ಅತ್ತೆ-ಸೋಸೆಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಜಗಳದಲ್ಲಿ ಮಗುವಿಗೆ ಹುಚ್ಚು ನಾಯಿ ಕಡಿದ ವಿಷಯವನ್ನು ಅತ್ತೆ ಬಚ್ಚಿಟ್ಟಿದ್ದರು. ಇದೀಗ ಒಂದು ಎಡವಟ್ಟು ಮಗುವಿನ ಪ್ರಾಣ ಕಸಿದಿದ್ದು, ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)
ಹಾಟ್ ಡ್ರೆಸ್ ನೋಡಿ ತಮ್ಮ ಮೇಲೆ ಮುಗಿಬಿದ್ದ ವಿರೋಧಿಗಳಿಗೆ ಸಮಂತಾ ಕೊಟ್ಟ ಮಾತಿನ ಪಂಚ್ ಹೀಗಿದೆ…
ಮೊದಲ ಬಾರಿ ಬಿಕಿನಿಯಲ್ಲಿ ಕಾಣಿಸಿಕೊಂಡ ಸೌತ್ ಬ್ಯೂಟಿ ವರು! ವಿಡಿಯೋ ನೋಡಿ ಹುಬ್ಬೇರಿಸಿದ ಅಭಿಮಾನಿಗಳು
ದಕ್ಷಿಣ ಭಾರತದ ನಟಿಯರ ಜತೆ ಬಾಲಿವುಡ್ ನಟ ವರುಣ್ಗೆ ಏನು ಕೆಲಸ? ಫೋಟೋಗಳು ವೈರಲ್…