More

    ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಂಗಡಿ ಯುವತಿ

    ಉಡುಪಿ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.

    ಸಹನಾ (23 ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಯುವತಿ. ಕಾಪು ತಾಲೂಕಿನ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದಿದ್ದ ಸಹನಾ ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡಿದ್ದ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

    ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಸಹನಾ ವಿಷ ಸೇವಿಸಿದ್ದಳು. ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದ ಸಹನಾ, ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ, ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಕೆಲಸ ಸಿಗದಿದ್ದರಿಂದ ಮನನೊಂದು ವಿಷ ಸೇವಿಸಿದ್ದಳು. ಮಿಷನ್ ಆಸ್ಪತ್ರೆ, ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಯ ಸೇರಿದಂತೆ ಮೂರು ಆಸ್ಪತ್ರೆಗಳಲ್ಲಿ 10 ದಿನ ಸಹನಾಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಎಲ್ಲವೂ ವಿಫಲವಾಗಿದೆ.

    ಸಹನಾ ಸಾವಿನ ಬೆನ್ನಲ್ಲೇ ಯುವ ಕಾಂಗ್ರೆಸ್​ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ. ಇಂದು ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇನ್ನು ಸಹನಾ ಸಾವು ಸಂಬಂಧ ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಮಧ್ಯಪ್ರದೇಶದ ಶಿಕ್ಷಣ ಸಚಿವರ ಸೊಸೆ ನೇಣಿಗೆ ಶರಣು: ಸಾವಿನ ಸುತ್ತ ಅನುಮಾನದ ಹುತ್ತ

    ಇನ್ನೇನು ಟೇಕಾಫ್​ ಆಗಬೇಕೆನ್ನುವಷ್ಟರಲ್ಲಿ ಹೊತ್ತಿ ಉರಿದ ವಿಮಾನ: ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ!

    ಗಂಡನ ಜತೆ ಮೌಖಿಕ ಸಂಭೋಗ ನಡೆಸಲು ಬಾಲಕಿಯ ದುರ್ಬಳಕೆ: ಖ್ಯಾತ ನಟಿಗೆ ಶಾಕ್​ ಕೊಟ್ಟ ಕೋರ್ಟ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts