ಸಚಿವ ಉಮೇಶ್​ ಕತ್ತಿ ನಿಧನ: ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶೋಕಾಚರಣೆ

ಬೆಂಗಳೂರು: ಸಚಿವ ಉಮೇಶ್​ ಕತ್ತಿ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯಾದ್ಯಂತ ಇಂದು ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ. ಅಲ್ಲದೆ, ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್​-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಸರ್ಕಾರ ಆದೇಶಿಸಿದೆ. ಇಂದು ನಡೆಯುವ ಶೋಕಾಚರಣೆ ಅವಧಿಯಲ್ಲಿ ಸರ್ಕಾರದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಮತ್ತು ರಾಷ್ಟ್ರಧ್ವಜ ಹಾರಿಸಲ್ಪಡುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು … Continue reading ಸಚಿವ ಉಮೇಶ್​ ಕತ್ತಿ ನಿಧನ: ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶೋಕಾಚರಣೆ