ಲಖನೌ: ಪಿಯು ವಿದ್ಯಾರ್ಥಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಲಿತ್ಪುರ್ ಜಿಲ್ಲೆಯಲ್ಲಿ ನಡೆದಿದ್ದು, ಒಟ್ಟು 28 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳಲ್ಲಿ ಸಂತ್ರಸ್ತೆಯ ತಂದೆ, ಸಮಾಜವಾದಿ ಪಾರ್ಟಿ (ಎಸ್ಪಿ) ಮತ್ತು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ)ಯ ಜಿಲ್ಲಾಧ್ಯಕ್ಷರು ಕೂಡ ಸೇರಿದ್ದಾರೆ. ಆರನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ತಂದೆ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮತ್ತು ಅಂದಿನಿಂದ ಅನೇಕ ಬಾರಿ ಬಲವಂತವಾಗಿ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಅನೇಕರಿಗೆ ಫೋನ್ ಮಾಡಿ, ವ್ಯವಹಾರದ ಮಾತುಗಳನ್ನಾಡಿ ಮನೆಗೆ ಕರೆಸಿ, ಅವರಿಂದಲೂ ಲೈಂಗಿಕ ದೌರ್ಜನ್ಯ ಎಸಗಿಸಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾಳೆ. ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷ ತಿಲಕ್ ಯಾದವ್ ಮತ್ತು ಆತನ ಮೂವರು ಕಿರಿಯ ಸಹೋದರರು ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ದೀಪಕ್ ಅಹಿರ್ವರ್ ಮತ್ತು ಇನ್ನೊಬ್ಬ ಬಿಎಸ್ಪಿ ನಾಯಕ ನೀರಜ್ ತಿವಾರಿ ಹಾಗೂ ಇನ್ನಿತರ ಕುಟುಂಬದ ಸದಸ್ಯರು ಬಲವಂತಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಈ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದ್ದಲ್ಲಿ ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಕಾಮುಕ ತಂದೆ ಹೆದರಿಸಿದ್ದಾನೆ. ತಂದೆಯ ಕರಾಳತೆಯನ್ನು ಸಹಿಸದೇ ಕೊನೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ ಮತ್ತು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
28 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆಕೆಗೆ ಓರ್ವ ಸಹೋದರನಿದ್ದಾನೆ. ಆಕೆ ನೀಡಿರುವ ಮಾಹಿತಿಯನ್ನು ಸದ್ಯ ಪರಿಶೀಲಿಸಲಾಗುತ್ತಿದೆ ಎಂದು ಲಲಿತ್ಪುರ್ ಎಎಸ್ಪಿ ಗಿರಿಜೇಶ್ ಕುಮಾರ್ ತಿಳಿಸಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ. ಈ ವಿಚಾರ ತುಂಬಾ ಸೂಕ್ಷ್ಮವಾಗಿರುವುದರಿಂದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಹೊಸ ಸಾಕ್ಷ್ಯವೊಂದು ಬೆಳಕಿಗೆ ಬಂದಿದ್ದು, ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತೇವೆ ಎಂದು ಗಿರಿಜೇಶ್ ಕುಮಾರ್ ಭರವಸೆ ನೀಡಿದ್ದಾರೆ. (ಏಜೆನ್ಸೀಸ್)
ಒಂದೇ ಒಂದು ಮತ ಪಡೆದ ತಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದು ಹೀಗೆ..
ಇನ್ಮುಂದೆ ಸಿನಿಮಾ ಪೈರಸಿ ಮಾಡುವವರಿಗೆ ಕಾದಿದೆ ಬಹು ದೊಡ್ಡ ಶಾಕ್: ಟೆಲಿಗ್ರಾಂ ಮೇಲೆ ಖಾಕಿ ಕಣ್ಣು
ಮೂರನೇ ವಿಶ್ವಯುದ್ಧಕ್ಕೆ ಏಲಿಯನ್ಗಳ ತಯಾರಿ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುಎಸ್ ಮಾಜಿ ಸೇನಾಧಿಕಾರಿ