ಉತ್ತರಕನ್ನಡ: ದಿನ ನಿತ್ಯದ ಕೆಲಸ ಮುಗಿಸಿ ಕೈ-ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಯುವಕನನ್ನು ಮೊಸಳೆ ಎಳೆದೊಯ್ದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಅರ್ಷದ್ ಖಾನ್ ರಾಯಚೂರ್ (22) ಮೊಸಳೆ ದಾಳಿಗೆ ಬಲಿಯಾದ ಯುವಕ. ಈ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಪಟೇಲ್ ನಗರದ ನಿವಾಸಿ. ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಅರ್ಷದ್ ಖಾನ್, ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ದಾಳಿ ಮಾಡಿ ಆತನನ್ನು ಎಳೆದೊಯ್ದಿದೆ.
ಮೃತ ಯುವಕನ ಸ್ನೇಹಿತ ಈ ಮಾಹಿತಿಯನ್ನು ನೀಡಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)
ಹೈಕೋರ್ಟ್ನಲ್ಲಿ ಹಿಜಾಬ್ ವಿಚಾರಣೆ; ವಿವಾದ ಕುರಿತ 2 ಪ್ರತ್ಯೇಕ ಅರ್ಜಿ ಕೈಗೆತ್ತಿಕೊಳ್ಳಲಿರುವ ನ್ಯಾಯಾಲಯ
ರೈತರ ಬಂಧನ ತಪ್ಪಿಸಲು ತಿದ್ದುಪಡಿ; ಸಾಗುವಳಿದಾರರಿಗೇ ಒತ್ತುವರಿ ಭೂಮಿ ಗುತ್ತಿಗೆ: ಸಚಿವ ಅಶೋಕ್ ಮಾಹಿತಿ
ಒಂದೇ ಚಿತ್ರ ಎಷ್ಟು ವರ್ಷ ಮಾಡುತ್ತೀರಿ?; ಆರ್. ಚಂದ್ರುಗೆ ಶಿವಣ್ಣ ಪ್ರಶ್ನೆ
ಮಲ್ಟಿಪ್ಲೆಕ್ಸ್ನಿಂದ ತೊಂದರೆ; ವಾಣಿಜ್ಯ ಮಂಡಳಿಗೆ ಜೋಗಿ ಪ್ರೇಮ್ ದೂರು