More

    ಕೈ-ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋದವನನ್ನು ಎಳೆದೊಯ್ದ ಮೊಸಳೆ: ದಾಂಡೇಲಿ ಯುವಕನ ದುರಂತ ಸಾವು

    ಉತ್ತರಕನ್ನಡ: ದಿನ ನಿತ್ಯದ ಕೆಲಸ ಮುಗಿಸಿ ಕೈ-ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಯುವಕನನ್ನು ಮೊಸಳೆ ಎಳೆದೊಯ್ದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

    ಅರ್ಷದ್ ಖಾನ್ ರಾಯಚೂರ್ (22) ಮೊಸಳೆ ದಾಳಿಗೆ ಬಲಿಯಾದ ಯುವಕ. ಈ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಪಟೇಲ್ ನಗರದ ನಿವಾಸಿ. ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಅರ್ಷದ್​ ಖಾನ್​, ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ದಾಳಿ ಮಾಡಿ ಆತನನ್ನು ಎಳೆದೊಯ್ದಿದೆ.

    ಮೃತ ಯುವಕನ ಸ್ನೇಹಿತ ಈ ಮಾಹಿತಿಯನ್ನು ನೀಡಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸಿದೆ.

    ಸ್ಥಳಕ್ಕೆ ಅರಣ್ಯಾಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

    ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ; ವಿವಾದ ಕುರಿತ 2 ಪ್ರತ್ಯೇಕ ಅರ್ಜಿ ಕೈಗೆತ್ತಿಕೊಳ್ಳಲಿರುವ ನ್ಯಾಯಾಲಯ

    ರೈತರ ಬಂಧನ ತಪ್ಪಿಸಲು ತಿದ್ದುಪಡಿ; ಸಾಗುವಳಿದಾರರಿಗೇ ಒತ್ತುವರಿ ಭೂಮಿ ಗುತ್ತಿಗೆ: ಸಚಿವ ಅಶೋಕ್ ಮಾಹಿತಿ

    ಒಂದೇ ಚಿತ್ರ ಎಷ್ಟು ವರ್ಷ ಮಾಡುತ್ತೀರಿ?; ಆರ್. ಚಂದ್ರುಗೆ ಶಿವಣ್ಣ ಪ್ರಶ್ನೆ

    ಮಲ್ಟಿಪ್ಲೆಕ್ಸ್​ನಿಂದ ತೊಂದರೆ; ವಾಣಿಜ್ಯ ಮಂಡಳಿಗೆ ಜೋಗಿ ಪ್ರೇಮ್ ದೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts