ವಿಜಯನಗರ: ಅಪಾರ ಪ್ರಮಾಣದ ಅವಧಿ ಮೀರಿದ ಮಾತ್ರೆಗಳು ಹೊಸಪೇಟೆಯ ಹೊರವಲಯದಲ್ಲಿ ಪತ್ತೆಯಾಗಿವೆ. ಲಕ್ಷಾಂತರ ಮೌಲ್ಯದ ಮಾತ್ರೆಗಳು ಎಂದು ಅಂದಾಜಿಸಲಾಗಿದೆ.
ಸಂಡೂರು ರಸ್ತೆಯ LFS ಶಾಲೆ ಬಳಿ ಅವಧಿ ಮೀರಿದ ಮಾತ್ರೆಗಳು ಪತ್ತೆಯಾಗಿವೆ. ಗರ್ಭಿಣಿಯರು, ಬಾಣಂತಿಯರು ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಮಾತ್ರೆಗಳಾಗಿದ್ದು, ಈ ಘಟನೆ ಸರ್ಕಾರದ ದುರಾವಸ್ಥೆಗೆ ಹಿಡಿದ ಕನ್ನಡಿಯಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳಿಗೆ ಹೊರಗಡೆ ಚೀಟಿ ಬರೆದು ಕೊಡಲಾಗುತ್ತಿದೆ. ಅದರ ಬದಲು ಈ ಔಷಧಿಗಳನ್ನು ಬಡವರಿಗೆ ನೀಡಿದ್ದರೆ, ಎಷ್ಟೋ ಅನುಕೂಲವಾಗುತ್ತಿತ್ತು. ಇದೀಗ ಅವಧಿ ಮೀರಿರುವುದರಿಂದ ಎಲ್ಲವನ್ನು ಹೊರಗಡೆ ತಂದು ಚೆಲ್ಲಲಾಗಿದೆ. ಸರ್ಕಾರಿ ಆಸ್ಪತ್ರೆಗಳ ದುರಾಡಳಿತ ಎಷ್ಟರಮಟ್ಟಿಗೆ ಇದೆ ಎಂಬುದಕ್ಕೆ ಈ ಘಟನೆ ಕಾರಣವಾಗಿದೆ.
ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆರೋಗ್ಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಚಾಕೊಲೇಟ್ ಕೊಡಿಸೋ ನೆಪದಲ್ಲಿ ಮಗುವನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ
ಮೇ 16ರಂದು ಶಾಲೆಗಳು ಪುನಾರಂಭ; 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ