ವಿಜಯನಗರ: ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ನೇಹಿತರಿಬ್ಬರು ದುರಂತ ಸಾವಿಗೀಡಾಗಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರಿನ ಬಳಿ ಬುಧವಾರ (ಮೇ.4) ನಡೆದಿದೆ.
ಬೈಕ್ಗೆ ಬಸ್ ಗುದ್ದಿದ ರಭಸಕ್ಕೆ ಕಿರಣ್(23) ಸ್ಥಳದಲ್ಲೇ ಮೃತಪಟ್ಟರೆ, ವೆಂಕಟೇಶ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸ್ನೇಹಿತರಿಬ್ಬರು ಕಾಕುಬಾಳು ಮೂಲದವರು.
ಗಾದಿಗನೂರಿನ ಜಾತ್ರೆಯ ಊಟ ಮುಗಿಸಿದ ಸ್ನೇಹಿತರಿಬ್ಬರು ಬೈಕ್ ಏರಿ ಕಾಕುಬಾಳು ಕಡೆಗೆ ಹೊರಟಿದ್ದರು. ಇದೇ ಸಂದರ್ಭದಲ್ಲಿ ಹೊಸಪೇಟೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಬೈಕ್ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಪೇಟೆಯ ಗ್ರಾಮೀಣ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಸುಳ್ಳು ಮಾಹಿತಿ ನೀಡಿದ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿದ ಚಾಮರಾಜನಗರದ ಜಿಲ್ಲಾಧಿಕಾರಿ
ತುಂಬಿದ ಗ್ರಾಮ ಸಭೆಯಲ್ಲಿ ಸರ್ಕಾರಿ ಅಧಿಕಾರಿಗೆ ಚಪ್ಪಲಿಯಲ್ಲಿ ಬಾರಿಸಿದ ಗ್ರಾ.ಪಂ ಉಪಾಧ್ಯಕ್ಷೆಗೆ ಮರುಕ್ಷಣವೇ ಶಾಕ್!
10 ವರ್ಷದ ಮಗಳನ್ನು ಕಾಮತೃಷೆಗೆ ಬಳಸಿಕೊಳ್ತಿದ್ದ ಉಪ ತಹಸೀಲ್ದಾರ್ಗೆ ಘನ ಘೋರ ಶಿಕ್ಷೆ ವಿಧಿಸಿದ ಕೋರ್ಟ್!