More

    ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ

    ವಿಜಯನಗರ: ಟ್ರಾಕ್ಸ್ ಕ್ರೂಸರ್​ ಆಕ್ಸಲ್ ಕಟ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

    ಮೃತರನ್ನು ಚಾಲಕ ಸಿದ್ದಯ್ಯ ಕಾಳಗಿ (48), ಕಲ್ಲವ್ವ (60), ಕುಂತವ್ವ (50), ನೀಲಮ್ಮ (54) ಮತ್ತು ಲಕ್ಷ್ಮೀಬಾಯಿ (60) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂಡಿ ಗ್ರಾಮದವರು.

    ನಿಡಗುಂದಿ ಗ್ರಾಮದ ಸುತ್ತಮುತ್ತಲಿನ ಜನರು ರಾಮೇಶ್ವರಕ್ಕೆ ಹೋಗುತ್ತಿದ್ದರು. ಈ ವೇಳೆ ಟ್ರಾಕ್ಸ್​ನ ಆಕ್ಸಲ್​ ಕಟ್​ ಆಗಿ ದುರಂತ ಸಂಭವಿಸಿದೆ. ಐವರು ಮೃತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಬಿಗ್​ಬಾಸ್​ ನಿರೂಪಕರ ವಿರುದ್ಧವೇ ನಾಲಿಗೆ ಹರಿಬಿಟ್ಟ ಸ್ಪರ್ಧಿ: ಸಿಂಬುಗೆ ಅವಮಾನ, ಅಭಿಮಾನಿಗಳ ಆಕ್ರೊಶ

    ಈ ಸಾವು ನ್ಯಾಯವೇ? ಗಂಡನ ಈ ಕೆಟ್ಟ ಚಟದಿಂದ ನೊಂದು ಸಾವಿನ ಹಾದಿ ಹಿಡಿದ 8 ತಿಂಗಳ ಗರ್ಭಿಣಿ

    ಯುವಕ-ಯುವತಿ ಪ್ರೇಮ ಪ್ರಕರಣದಲ್ಲಿ ಏನೂ ತಪ್ಪು ಮಾಡದ ರೈತನಿಗೆ ಜೈಲು ಶಿಕ್ಷೆ! ಬೆಳಗಾವಿಯಲ್ಲಿ ವಿಚಿತ್ರ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts