ಮೈನ್ಪುರಿ: ಶಿಕ್ಷಕಿಯೊಬ್ಬರ ಬಳಿ ದೇಶಿ ನಿರ್ಮಿತ ಪಿಸ್ತೂಲ್ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಿನ್ನೆ (ಏ.13) ನಡೆದಿರುವುದಾಗಿ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.
‘
ಶಿಕ್ಷಕಿಯನ್ನು ಬಂಧಿಸಲಾಗಿದ್ದು, ಆಕೆಯನ್ನು ಕೃಷ್ಣಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ. ಈಕೆ ಫಿರೋಜಾಬಾದ್ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸದ ಮೇಲೆ ನಿನ್ನೆ ಮೈನ್ಪುರಿಗೆ ಬಂದಿರುವಾಗ ಪಿಸ್ತೂಲ್ ಪತ್ತೆಯಾಗಿದೆ.
ಮೈನ್ಪುರಿಯ ಕೊಟ್ವಾಲಿ ಏರಿಯಾದಲ್ಲಿ ಮಹಿಳೆಯೊಬ್ಬಳು ಪಿಸ್ತೂಲ್ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಳೆ ಎಂಬ ಮಾಹಿತಿ ದೊರೆತ ಬೆನ್ನಲ್ಲೇ ಪೊಲೀಸರು ಆಕೆಯನ್ನು ಹುಡುಕಾಡಿ ಪಿಸ್ತೂಲ್ ಮತ್ತು ಆಕೆಯನ್ನು ವಶಕ್ಕೆ ಪಡೆದುಕೊಂಡರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳಾ ಕಾನ್ಸ್ಟೇಬಲ್ ಒಬ್ಬರು ನೀಲಿ ಬಣ್ಣದ ಜೀನ್ಸ್ ಧರಿಸಿರುವ ಶಿಕ್ಷಕಿಯ ಜೇಬಿನಿಂದ 315 ಬೋರ್ ದೇಶಿ ನಿರ್ಮಿತ ಪಿಸ್ತೂಲ್ ಅನ್ನು ವಶಕ್ಕೆ ಪಡೆದುಕೊಂಡು ದೃಶ್ಯವಿದೆ.
ಆರೋಪಿ ಶಿಕ್ಷಕಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೂಕ್ತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪಿಸ್ತೂಲ್ ಸಾಗಿಸುತ್ತಿದ್ದರ ಹಿಂದಿನ ಕಾರಣ ತಿಳಿಯಲು ತನಿಖೆ ಆರಂಭವಾಗಿದೆ. (ಏಜೆನ್ಸೀಸ್)
ಅಂದು ರಾಜ್ಯದಲ್ಲಿ ನಡೆದ ಘಟನೆಗೆ ಪ್ರತಿಯಾಗಿ ಯಶ್ ಮೇಲೆ ಸೇಡು ತೀರಿಸಿಕೊಳ್ತೇ ತೆಲುಗು ಮೀಡಿಯಾ!
ಭಾರತಕ್ಕೆ ಬರಲು ಅನುಮತಿ ಕೊಡಿ: ಪ್ರಧಾನಿ ಮೋದಿಗೆ ಪಿಒಕೆ ಗ್ಯಾಂಗ್ರೇಪ್ ಸಂತ್ರಸ್ತೆಯ ಕಣ್ಣೀರಿನ ಮನವಿ