ವಿಶಾಖಪಟ್ಟಣ: ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ ನಡೆದಿದೆ.
ಆಂಧ್ರದ ಪ್ರವಾಸೋದ್ಯಮ ಸಚಿವ ಆವಂತಿ ಶ್ರೀನಿವಾಸ ರಾವ್ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ವಿಶಾಖಪಟ್ಟಣದ ಬಿರ್ಲಾ ಜಂಕ್ಷನ್ ಬಳಿ ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಗೆ ಸಚಿವರು ಬೆಂಗಾವಲು ವಾಹನ ಡಿಕ್ಕಿ ಹೊಡದಿದೆ. ಮೃತ ವ್ಯಕ್ತಿಯನ್ನು ಸೂರ್ಯನಾರಾಯಣ (40) ಎಂದು ಗುರುತಿಸಲಾಗಿದೆ. ಈತ ಕಟ್ಟಡ ಕಾರ್ಮಿಕನಾಗಿದ್ದ.
ಸಚಿವರ ಬೆಂಗಾವಲು ವಾಹನವು ವಿಮಾನ ನಿಲ್ದಾಣದಿಂದ ಸೈರನ್ ಶಬ್ದದೊಂದಿಗೆ ಬರುತ್ತಿರುವಾಗ ಶಬ್ದದಿಂದ ಗಾಬರಿಗೊಂಡ ಬೈಕ್ ಸವಾರ ಎಡಕ್ಕೆ ತಿರುವು ಪಡೆಯುವಾಗ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ತಲೆಗೆ ಭಾರೀ ಪೆಟ್ಟು ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಬೈಕ್ ಸವಾರನ ಸಾವಿಗೆ ಕಾರಣವಾದ ವಾಹನವನ್ನು ಪೊಲೀಸರು ತಡೆಯಲಿಲ್ಲ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಬೈಕ್ ಸವಾರ ಸೂರ್ಯನಾರಾಯಣ ಅಗಲಿದ್ದಾರೆ. ಸೀತಮ್ಮಧಾರದಲ್ಲಿರುವ ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದ ಮೃತನ ಸಂಬಂಧಿಕರು ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಅನೇಕ ಪ್ರತಿಪಕ್ಷಗಳು ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿದವು. ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷವೂ ಕೂಡ ಸಚಿವರ ವಿರುದ್ಧ ಪ್ರತಿಭಟನೆ ನಡೆಸಿತು. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಶ್ರೀನಿವಾಸ್ ರಾವ್, ಅಪಘಾತ ಸಂಭವಿಸಿದ ವೇಳೆ ನಾನು ಬೆಂಗಾವಲು ವಾಹನದಲ್ಲಿ ಇರಲಿಲ್ಲ ಎಂದಿದ್ದಾರೆ. ಮೃತನ ಕುಟುಂಬಸ್ಥರು ಹಾಗೂ ಕಾರ್ಮಿಕ ಸಂಘಟನೆಗಳ ಜತೆ ಮಾತನಾಡಿದ್ದೇನೆಂದು ಹೇಳಿದ್ದಾರೆ. ಮೃತ ಸೂರ್ಯನಾರಾಯಣರ ಮೂವರು ಮಕ್ಕಳಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಹಿರಿಯ ಮಗಳಿಗೆ ವಿಶಾಖಪಟ್ಟಣಂ ಮಹಾನಗರ ಪಾಲಿಕೆಯಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಕುಟುಂಬಕ್ಕೆ ಮನೆಯೊಂದನ್ನು ಮಂಜೂರು ಮಾಡಿಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. (ಏಜೆನ್ಸೀಸ್)
ಬಿಗ್ಬಾಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಹಿ ಘಟನೆಗೆ ಸಾಕ್ಷಿಯಾದ ಬಿಗ್ ಹೌಸ್: ನೆಟ್ಟಿಗರ ಆಕ್ರೋಶ
ಯೂಟ್ಯೂಬ್ನಿಂದ ಮಹತ್ವದ ನಿರ್ಧಾರ: ಇನ್ಮುಂದೆ ಯೂಟ್ಯೂಬ್ ವಿಡಿಯೋಗಳ ಕೆಳಗೆ ಇದು ಕಾಣಲ್ಲ!
ಕೇರಳ ಮಾಡೆಲ್ಗಳಿಬ್ಬರ ದುರ್ಮರಣ: ಮಧ್ಯರಾತ್ರಿಯ ಡಿಜೆ ಪಾರ್ಟಿ ರಹಸ್ಯ ಭೇದಿಸಲು ಪೊಲೀಸರ ಹರಸಾಹಸ!