ಮುಂಬೈ: ಚಿರತೆಯೊಂದು ಮನೆಯೊಳಗೆ ನುಗ್ಗಿದ ಘಟನೆ ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯಾನಗರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ದುರ್ಗಾ ಮೂರ್ತಿಯ ವಿಸರ್ಜನೆಗೆಂದು ಕುಟುಂಬದ ಸದಸ್ಯರೆಲ್ಲರು ಹೊರಗಡೆ ತೆರಳಿದ್ದರು. ಇದೇ ಸಮಯದಲ್ಲಿ ಚಿರತೆಯು ಮನೆಯೊಳಗೆ ನುಗ್ಗಿದೆ. ಮೂರ್ತಿ ವಿಸರ್ಜಿಸಿ ಮನೆಯ ಸದಸ್ಯರೆಲ್ಲರು ವಾಪಸ್ ಬಂದಾಗ ಮನೆಯ ಬಾಗಿಲು ಮುಂದೆಯೇ ಚಿರತೆ ಕುಳಿತಿರುವುದನ್ನು ಕಂಡು ಎಲ್ಲರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಮನೆಯವರು ಓಡಿ ಹೋಗಿ ಗೇಟ್ ಬಾಗಿಲು ಬಂದ್ ಮಾಡಿ ಚಿರತೆಯನ್ನು ಕೂಡಿ ಹಾಕಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಜನರ ಗುಂಪು ಮನೆಯ ಸುತ್ತಲೂ ಜಮಾಯಿಸಿತು ಮತ್ತು ಅನೇಕರು ಚಿರತೆ ಮನೆ ಒಳಗೆ ಸುತ್ತಾಡುತ್ತಿರುವುದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿದೆ.
ಸದ್ಯ ಅರಣ್ಯ ಇಲಾಖೆಗೆ ಚಿರತೆ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಚಿರತೆಯನ್ನು ಸೆರೆಹಿಡಿದಿದ್ದಾರೆ. (ಏಜೆನ್ಸೀಸ್)
(ವಿಡಿಯೋ ಕೃಪೆ: ಎನ್ಡಿಟಿವಿ)
ಡೂಪ್ಲಿಕೇಟ್ ಸಿಮ್ ಖರೀದಿಸಲು ಬಂದ ನಟಿಯನ್ನು ಶೋ ರೂಮ್ನಲ್ಲಿ ಕೂಡಿ ಹಾಕಿ ಕೆಟ್ಟದಾಗಿ ವರ್ತಿಸಿದ ಉದ್ಯೋಗಿ!
ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟುಕುಗೊಳಿಸುವ ಪ್ರಶ್ನೆಯೇ ಇಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ