ಮುಂಬೈ: ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ರ ಮಗ ಆರ್ಯನ್ ಖಾನ್ನ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ. ಆರ್ಯನ್ರೊಂದಿಗೆ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚ ಅವರಿಗೂ ಜಾಮೀನು ಲಭ್ಯವಾಗಿಲ್ಲ.
ಆರ್ಯನ್ ಖಾನ್ ಜಾಮೀನು ನಿರಾಕರಣೆ ಕಾರಣ ಏನೆಂದರೆ, ಆತನ ವಾಟ್ಸ್ಆ್ಯಪ್ ಚಾಟ್. ಈ ಬಗ್ಗೆ ಉಲ್ಲೇಖಿಸಿರುವ ಮುಂಬೈ ನ್ಯಾಯಾಲಯ, ಆರ್ಯನ್ ಖಾನ್ ನಿರಂತರವಾಗಿ ಅಕ್ರಮ ಡ್ರಗ್ಸ್ ಚಟುವಟಿಕೆಯಲ್ಲಿ ತೊಡಗಿದ್ದ ಎಂಬುದನ್ನು ಆತನ ವಾಟ್ಸ್ಚಾಟ್ ಬಹಿರಂಗಪಡಿಸಿದೆ. ಹೀಗಾಗಿ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಜಡ್ಜ್ ವಿವಿ ಪಾಟೀಲ್ ಹೇಳಿದ್ದಾರೆ.
ಡ್ರಗ್ಸ್ ಪೂರೈಕೆದಾರರ ಜತೆಗೆ ಆರ್ಯನ್ ಖಾನ್ಗೆ ಸಂಬಂಧ ಇರುವುದು ಕೂಡ ಬಹಿರಂಗವಾಗಿರುವುದು ಜಾಮೀನು ಸಿಗದೇ ಇರುವುದಕ್ಕೆ ಕಾರಣವಾಗಿದೆ. ಇನ್ನು ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್, ತನ್ನ ಶೋನಲ್ಲಿ 6 ಗ್ರಾಂ ಚರಾಸ್ ಅಡಗಿಸಿಟ್ಟಿದ್ದು ಆರ್ಯನ್ಗೆ ತಿಳಿದಿತ್ತು ಎಂದು ಕೋರ್ಟ್ ಹೇಳಿದೆ. ಇನ್ನು ಆರೋಪಿಗೆ ಜಾಮೀನು ನೀಡಿದರೆ, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಸಾಕ್ಷಿಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಜಾಮೀನು ನಿರಾಕರಿಸಿರುವುದಾಗಿ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಅಂದಹಾಗೆ ಅಕ್ಟೋಬರ್ 2ನೇ ತಾರೀಕು ಕಾರ್ಡೆಲಿಯ ಕ್ರೂಸ್ ಶಿಪ್ ಮೇಲೆ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಆರ್ಯನ್ ಖಾನ್ಅನ್ನು ವಿಚಾರಣೆ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಅಧಿಕಾರಿಗಳು ಅ.3 ರಂದು ಅವನನ್ನು ಬಂಧಿಸಿದ್ದರು. 23 ವರ್ಷ ವಯಸ್ಸಿನ ಆರ್ಯನ್ ಖಾನ್ನೊಂದಿಗೆ ಇತರ 9 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಕಳೆದ 12 ದಿನಗಳಿಂದ ಮುಂಬೈನ ಅರ್ಥರ್ ರಸ್ತೆ ಜೈಲಿನಲ್ಲಿರುವ ಖಾನ್ಗೆ ಈ ಮೊದಲು ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಜಾಮೀನು ಲಭಿಸಿರಲಿಲ್ಲ. ನಂತರ ವಿಶೇಷ ಸೆಷನ್ಸ್ ಕೋರ್ಟ್ನಲ್ಲಿ ಸಲ್ಲಿಕೆಯಾದ ಜಾಮೀನು ಅರ್ಜಿಯ ತೀರ್ಪನ್ನು ಇಂದಿಗೆ ಕಾದಿರಿಸಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಸದ್ಯಕ್ಕೆ ಜೈಲಿನಲ್ಲೇ ಕಾಲ ಕಳೆಯಬೇಕಾಗಿರುವ ಆರ್ಯನ್ ಖಾನ್ರ ವಕೀಲರಿಗೆ ಎನ್ಡಿಪಿಎಸ್ ಕೋರ್ಟ್ನ ಈ ಆದೇಶದ ವಿರುದ್ಧ ಹೈಕೋರ್ಟ್ಗೆ ಅಪೀಲು ಸಲ್ಲಿಸುವ ಅವಕಾಶವಿದೆ. (ಏಜೆನ್ಸೀಸ್)
ಇಂಡೋ-ಪಾಕ್ ಕ್ರಿಕೆಟ್ ಕದನಕ್ಕೆ ದಿನಗಣನೆ: ಮಹತ್ವದ ನಿರ್ಧಾರ ಮಾಡಿದ ಸಾನಿಯಾ ಮಿರ್ಜಾ..!
ಆಂಟಿ ಲವ್ ಕಹಾನಿ ಕೊಲೆಯಲ್ಲಿ ಅಂತ್ಯ: ಅಪ್ರಾಪ್ತನ ಜತೆ ಓಡಿ ಹೋಗಲು ಮುಂದಾಗಿದ್ದವಳು ಆತನಿಂದಲೇ ಹತ್ಯೆ?
ಈ 3 ಯೂಟ್ಯೂಬ್ ಚಾನೆಲ್ಗಳ ವಿರುದ್ಧ ಕಾನೂನು ಸಮರ ಸಾರಿದ ಸಮಂತಾ! ದೂರಿನಲ್ಲಿ ಸ್ಯಾಮ್ ಹೇಳಿದ್ದಿಷ್ಟು…