ವೇಮುರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಿಸಿರುವ ಘಟನೆ ಆಂಧ್ರ ಪ್ರದೇಶದ ಅನಂತವರಂನಲ್ಲಿ ಸೋಮವಾರ ನಡೆದಿದೆ.
ಆಂಧ್ರ ಪೊಲೀಸರ ಪ್ರಕಾರ ಗುಂಟೂರು ಜಿಲ್ಲೆಯ ಕೊಲ್ಲಿಪರ ಮಂಡಲದ ಲಕ್ಷ್ಮೀ ಪೂಜಿತ ಎಂಬಾಕೆ ಅನಂತಪುರ ಜಿಲ್ಲೆಯ ಕೊಲ್ಲೂರು ವಲಯದ ವಿಶ್ವನಾಥ್ ಎಂಬಾತನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ. ಲಕ್ಷ್ಮೀ ಪೂಜಿತಾ ತೆನಾಲಿ ಬಳಿಯ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಶ್ವನಾಥ್ ಅದೇ ಕಾಲೇಜಿನಲ್ಲಿ ಬಸ್ ಚಾಲಕನಾಗಿದ್ದ. ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.
ಇಬ್ಬರು ಕಳೆದ ಏಪ್ರಿಲ್ 11ರಂದು ಮದುವೆ ಆಗಿದ್ದರು. ಆದರೆ, ಈ ಮದುವೆ ಯುವತಿ ಮನೆಯವರಿಗೆ ಇಷ್ಟವಿರಲಿಲ್ಲ. ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸದೇ ಪೂಜಿತಾ ಮದುವೆಯಾಗಿದ್ದಳು. ನವದಂಪತಿ ಅನಂತವರಂನಲ್ಲಿ ನೆಲೆಸಿದ್ದರು.
ಸೋಮವಾರ ಬೆಳಗ್ಗೆ ಅನಂತವರಂನಲ್ಲಿರುವ ಪೂಜಿತಾ ಅವರ ಅತ್ತೆ ಮನೆಗೆ ಬಂದ ಅವರ ಅಜ್ಜಿ, ಆಂಟಿ ಮತ್ತು ಅಂಕಲ್ ತಾಯಿಗೆ ಹುಷಾರಿಲ್ಲ ಎಂದು ಹೇಳಿದ್ದಾರೆ. ಆದರೆ, ಇದನ್ನು ನಂಬಲು ಒಪ್ಪದ ಪೂಜಿತಾ ಅವರೊಂದಿಗೆ ತೆರಳು ನಿರಾಕರಿಸಿದ್ದಾಳೆ. ಇದಾದ ಬಳಿಕ ಪೂಜಿತಾ ಅವರ ತಂದೆ ಶ್ರೀನಿವಾಸ ರೆಡ್ಡಿ, ಸಹೋದರ ನಿರಂಜನ್ ರೆಡ್ಡಿ ಮತ್ತು ಕೆಲ ಯುವಕರು ಪೂಜಿತಾಳನ್ನು ಬಲವಂತವಾಗಿ ಕಾರಿನಲ್ಲಿ ಹಾಕಿಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.
ಪೂಜಿತಾಳನ್ನು ಹೊತ್ತುಯ್ಯುವ ಸಮಯದಲ್ಲಿ ಆಕೆಯ ಪತಿ ವಿಶ್ವನಾಥ್ ಬಿಡಿಸಲು ಪ್ರಯತ್ನಿಸಿದಾದರೂ ಆತನ ಮೇಲೆ ಹಲ್ಲೆ ಮಾಡಿ ಪೂಜಿತಾಳನ್ನು ಅಪಹರಿಸಿದ್ದಾರೆ. ಈ ಸಂಬಂಧ ವಿಶ್ವನಾಥ್ ಸ್ಥಳೀಯ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್)
ಚಿಕನ್ ಶೋರ್ಮಾ ತಿಂದ ಮರುದಿನವೇ ವಿದ್ಯಾರ್ಥಿನಿ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ
ಎಲ್ಲವೂ ಕಾಮನ್… ಲಾಕಪ್ ಶೋನಲ್ಲಿ ಸಿನಿ ಜಗತ್ತಿನ ಕರಾಳ ಮುಖ ಬಯಲು ಮಾಡಿದ ನಟಿ ಕಂಗನಾ ರಣಾವತ್!
ಮನೆ ಮಾರಿ 50 ಲಕ್ಷ ರೂ. ಕೊಟ್ರು… ಕೆಲ್ಸನೂ ಹೋಯ್ತು- ದುಡ್ಡೂ ಹೋಯ್ತು.. ಅರೆಸ್ಟೂ ಆದ್ರು!