ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಲ್ಲ ಪಕ್ಷಗಳ ನಾಯಕರು ಪ್ರಧಾನಿ ಮೋದಿ ನಡೆಯನ್ನು ಸ್ವಾಗತಿಸಿದ್ದು, ನವೆಂಬರ್ 19 ಅನ್ನು ದೇಶದ ರೈತರ ಗೆಲುವು ಎಂದು ಕಾಂಗ್ರೆಸ್ ಕರೆದಿದೆ.
ರೈತರಿಗೆ ಮಾರಕವಾಗಿದ್ದ ಕಪ್ಪು ಕಾನೂನುಗಳನ್ನು ರದ್ದುಗೊಳಿಸುವುದು ಸರಿಯಾದ ದಿಕ್ಕಿನಲ್ಲಿ ಇಟ್ಟ ಒಂದು ಹೆಜ್ಜೆಯಾಗಿದೆ. ಕಿಸಾನ್ ಮೋರ್ಚಾದ ಸತ್ಯಾಗ್ರಹಕ್ಕೆ ಐತಿಹಾಸಿಕ ಯಶಸ್ಸು ಸಿಕ್ಕಿದೆ. ನಿಮ್ಮ ತ್ಯಾಗವು ಲಾಭಾಂಶವನ್ನು ನೀಡಿದೆ. ಪಂಜಾಬ್ನಲ್ಲಿ ಕೃಷಿ ಪುನರುಜ್ಜೀವನವು ಪಂಜಾಬ್ ಸರ್ಕಾರದ ಪ್ರಮುಖ ಆದ್ಯತೆಯಾಗಿರಬೇಕು ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಇಂದು ಬೆಳಕಿನ ದಿನದಂದು ಎಷ್ಟು ದೊಡ್ಡ ಸುದ್ದಿ ಸಿಕ್ಕಿತು. ಎಲ್ಲ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರು ಅಮರವಾಗಿರುತ್ತಾರೆ. ಕೃಷಿ ಮತ್ತು ರೈತರನ್ನು ಉಳಿಸಲು ಈ ದೇಶದ ರೈತರು ತಮ್ಮ ಜೀವನವನ್ನು ಹೇಗೆ ಸಾಲಿನಲ್ಲಿ ಇಟ್ಟಿದ್ದಾರೆ ಎಂಬುದನ್ನು ಮುಂಬರುವ ಪೀಳಿಗೆಗಳು ನೆನಪಿಸಿಕೊಳ್ಳುತ್ತವೆ. ನನ್ನ ದೇಶದ ರೈತರಿಗೆ ನಾನು ನಮಸ್ಕರಿಸುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದರು.
आज प्रकाश दिवस के दिन कितनी बड़ी ख़ुशख़बरी मिली। तीनों क़ानून रद्द। 700 से ज़्यादा किसान शहीद हो गए। उनकी शहादत अमर रहेगी। आने वाली पीढ़ियाँ याद रखेंगी कि किस तरह इस देश के किसानों ने अपनी जान की बाज़ी लगाकर किसानी और किसानों को बचाया था। मेरे देश के किसानों को मेरा नमन
— Arvind Kejriwal (@ArvindKejriwal) November 19, 2021
ಸತ್ಯಾಗ್ರಹದಿಂದ ದೇಶದ ಅನ್ನದಾತರು ದುರಹಂಕಾರದ ತಲೆಯನ್ನು ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
देश के अन्नदाता ने सत्याग्रह से अहंकार का सर झुका दिया।
अन्याय के खिलाफ़ ये जीत मुबारक हो!जय हिंद, जय हिंद का किसान!#FarmersProtest https://t.co/enrWm6f3Sq
— Rahul Gandhi (@RahulGandhi) November 19, 2021
ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ
ಮೊದಲ ದಿನವೇ ಎಡವಿತು ಪೇಟಿಎಂ; ದೇಶದ ಅತಿದೊಡ್ಡ ಐಪಿಒಕ್ಕೆ ಭಾರಿ ಹೊಡೆತ, ಷೇರು ಮೌಲ್ಯ ಶೇ. 28 ಕುಸಿತ
ಇಂದು ಶತಮಾನದ ಸುದೀರ್ಘ ಚಂದ್ರಗ್ರಹಣ; ಭಾರತದ ಈಶಾನ್ಯ ರಾಜ್ಯಗಳ ಕೆಲ ಪ್ರದೇಶದಲ್ಲಿ ಮಾತ್ರ ಖಗೋಳ ವಿಸ್ಮಯ ಗೋಚರ