More

    ನೀವು ಹಣಕ್ಕಾಗಿ ರವೀಂದರ್​ರನ್ನು ಮದುವೆಯಾದ್ರಾ? ನಟಿ ಮಹಾಲಕ್ಷ್ಮೀ ಕೊಟ್ಟ ಉತ್ತರ ಹೀಗಿತ್ತು…

    ಚೆನ್ನೈ: ಧಾರಾವಾಹಿ ನಟಿ ವಿ.ಜೆ. ಮಹಾಲಕ್ಷ್ಮೀ ಮತ್ತು ತಮಿಳು ನಿರ್ಮಾಪಕ ರವೀಂದರ್​ ತಮ್ಮ ಪ್ರೇಮ ವಿವಾಹದಿಂದಲೇ ಇತ್ತೀಚೆಗೆ ಭಾರಿ ಸುದ್ದಿಯಾದರು. ಅದಕ್ಕೆ ಕಾರಣವೇನೆಂದರೆ, ಮಹಾಲಕ್ಷ್ಮೀ ಸೌಂದರ್ಯವತಿಯಾಗಿದ್ದು, ಆಕೆ ಮದುವೆ ಆಗಿರುವ ರವೀಂದರ್​ ದಡೂತಿ ಮನುಷ್ಯ. ಹೀಗಾಗಿ ಇಬ್ಬರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಸಿಕ್ಕಾಪಟ್ಟೆ ಟ್ರೋಲ್​ ಸಹ ಆಯಿತು.

    ಮಹಾಲಕ್ಷ್ಮೀ ಮತ್ತು ರವಿಂದರ್​ ಇಬ್ಬರು ತಿರುಪತಿಯಲ್ಲಿ ಸೆ.1ರಂದು ಮದುವೆ ಆದರು. ಇಬ್ಬರಿಗೂ ಇದು ಎರಡನೇ ಮದುವೆ ಆಗಿದ್ದು, ಮಹಾಬಲಿಪುರಂನಲ್ಲಿ ಇಬ್ಬರು ಹನಿಮೂನ್​ ಎಂಜಾಯ್​ ಮಾಡುತ್ತಿದ್ದಾರೆ. ಮದುವೆ ಬೆನ್ನಲ್ಲೇ ನವದಂಪತಿ ಸನ್​ ಟಿವಿಗೆ ಸಂದರ್ಶನ ನೀಡಿದ್ದರು. ಈ ವೇಳೆ ಹಣಕ್ಕಾಗಿ ಮದುವೆಯಾದ್ರಾ? ಎಂದು ಮಹಾಲಕ್ಷ್ಮೀ ಅವರನ್ನು ಪ್ರಶ್ನಿಸಲಾಗಿತ್ತು. ಏಕೆಂದರೆ, ಅನೇಕರ ಮನದಲ್ಲಿಯೂ ಇದೇ ಪ್ರಶ್ನೆ ಇದೆ. ಅಲ್ಲದೆ, ಕಾಮೆಂಟ್​ಗಳಲ್ಲಿಯೂ ಹಣಕ್ಕಾಗಿಯೇ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಪ್ರಶ್ನೆಗೆ ಉತ್ತರ ನೀಡಿದ ಮಹಾಲಕ್ಷ್ಮೀ ನಾನು ಆರ್ಥಿಕವಾಗಿ ಸ್ವತಂತ್ರಳಾಗಿದ್ದಾನೆ ಮತ್ತು ನನ್ನ ಮಗನನ್ನು ನನ್ನದೇ ಹಣದಲ್ಲಿ ಬೆಳೆಸುವಷ್ಟು ಆರ್ಥಿಕವಾಗಿ ಸದೃಢಳಾಗಿದ್ದೇನೆ. ಮದುವೆ ಆಗದಿರಲು ಬಯಸಿದ್ದೇ ಆದರೆ, ರವೀಂದರ್​ ಕೇಳಿದ ರೀತಿ ನನಗೆ ಇಷ್ಟವಾಯಿತು. ನೀವು ನನ್ನ ಪತ್ನಿಯಾಗುವಿರಾ? ಎಂದು ಮಸೇಜ್​ ಮಾಡಿದರು. ಮಸೇಜ್​ ನೋಡಿದ ಬಳಿಕ ತುಂಬಾ ಸಮಯ ತೆಗೆದುಕೊಂಡು, ಯೋಚಿಸಿ, ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು.

    ನನ್ನ ತಂದೆ ದೊಡ್ಡ ಕೊರಿಯೋಗ್ರಾಫರ್​. ಬಾಹುಬಲಿ ಮತ್ತು ಆರ್​ಆರ್​ಆರ್​ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ನಾನು ಕೂಡ ಸಿನಿ ಇಂಡಸ್ಟ್ರಿಯಲ್ಲಿದ್ದೇನೆ. ನಮ್ಮದು ಆರ್ಥಿಕವಾಗಿ ಸದೃಢವಾದ ಕುಟುಂಬ. ನನ್ನ ಜೀವನವನ್ನು ನಿಶ್ಚಿಂತೆಯಿಂದ ಸಾಗಿಸಲು ಬೇಕಾದ ಹಣ ನನ್ನ ಬಳಿ ಇದೆ. ಹೀಗಾಗಿಯೇ ಮದುವೆ ಆಗುವುದು ಬೇಡ ಎಂದು ನಿರ್ಧರಿಸಿದ್ದೆ.

    ಅವರು ನಿರ್ಮಾಪಕ ಎಂಬ ಕಾರಣದಿಂದ ಈ ಪ್ರಶ್ನೆಗಳು ಕೇಳಿಬಂದಿವೆ. ಹೇಳಬೇಕೆಂದರೆ, ನಾನು ಅವರನ್ನು ವೈಯಕ್ತಿಕವಾಗಿ ಇಷ್ಟಪಟ್ಟೆ. ಅವರು ನಿರ್ಮಾಪಕರಲ್ಲದಿದ್ದರೂ ಅವರನ್ನು ಮದುವೆಯಾಗುತ್ತಿದ್ದೆ. ಅವರು ನನ್ನನ್ನು ಕೇಳಿದ ರೀತಿ ಬೇರೆಯವರು ಕೇಳಿದ್ದರೂ ನನ್ನ ನಿಲುವು ಅದೇ ಆಗುತ್ತಿತ್ತು. ಅವರು ನಿರ್ಮಾಪಕ ಎಂಬ ಕಾರಣಕ್ಕೆ ಜನ ಹೀಗೆ ಮಾತನಾಡುತ್ತಾರೆ. ನನ್ನನ್ನು ವೈಯಕ್ತಿಕವಾಗಿ ತಿಳಿದಿರುವ ಜನರಿಗೆ ನನ್ನ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದರು.

    ಅಂದಹಾಗೆ ನವದಂಪತಿ ಸದ್ಯ ಹನಿಮೂನ್​ ಪ್ರವಾಸದಲ್ಲಿದ್ದಾರೆ. ಮಹಾಲಕ್ಷ್ಮೀ ಅವರು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್‌, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. ರವೀಂದರ್‌ ಚಂದ್ರಶೇಖರನ್‌ ಅವರು ‘ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್‌ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

    ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದರು. ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಮದುವೆಗೆ ಚಿತ್ರರಂಗದವರು ಹಾಗೂ ಅಭಿಮಾನಿಗಳು ಶುಭ ಹಾರೈಸಿದ್ದಾರೆ. (ಏಜೆನ್ಸೀಸ್​)

    ಮದ್ವೆ ಮಂಟಪಕ್ಕೆ ನುಗ್ಗಿ ವರನ ಕೈಯಿಂದ ತಾಳಿ ಕಿತ್ತುಕೊಂಡು ಪ್ರೇಯಸಿಗೆ ಕಟ್ಟಲು ಯತ್ನ: ಮುಂದೆ ನಡೆದದ್ದಿಷ್ಟು…

    ಪ್ಲೀಸ್​ ಈ ಒಂದು ಪಾತ್ರ ಕೊಡಿ: ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡ ನಟಿ ವರಲಕ್ಷ್ಮೀ

    ಗಣೇಶ ವಿಸರ್ಜನೆ ವೇಳೆ ಗಲಾಟೆ ಕೊಲೆಯಲ್ಲಿ ಅಂತ್ಯ! ಕಾಲೇಜು ವಿದ್ಯಾರ್ಥಿಗಳಿಂದ ಭಯಾನಕ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts