More

    ಅಜ್ಜಿಯರು ದೇವತೆಗಳಾಗಿದ್ದು, ಅವರ ನೆನಪುಗಳು ಶಾಶ್ವತವಾಗಿ ಉಳಿಯುತ್ತವೆ, ಜೈ ಶ್ರೀರಾಮ್: ರಚಿನ್ ರವೀಂದ್ರ

    ಬೆಂಗಳೂರು: ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ತಂಡದ ಪರ ಅಮೋಘ ಪ್ರದರ್ಶನದ ಮೂಲಕ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್​ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ.

    ಇತ್ತೀಚಿಗೆ ರಚಿನ್​ ರವೀಂದ್ರ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿ ಮನೆಗೆ ಭೇಟಿ ನೀಡಿದ್ದರು. ಮೊಮ್ಮಗ ಮನೆಗೆ ಭೇಟಿ ನೀಡಿದ ಖುಷಿಗೆ ಅವರ ಅಜ್ಜಿ ದೃಷ್ಠಿ ತೆಗೆದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.

    ತಮ್ಮ ಅಜ್ಜಿ ಮನೆಗೆ ಭೇಟಿ ನೀಡಿದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಚಿನ್​, ಇಂತಹ ಅದ್ಭುತ ಕುಟುಂಬವನ್ನು ಪಡೆಯಲು ಅದೃಷ್ಟ ಮಾಡಿದ್ದೇನೆ. ಅಜ್ಜಿಯರು ದೇವತೆಗಳಾಗಿದ್ದು, ಅವರ ನೆನಪುಗಳು ಮತ್ತು ಆಶೀರ್ವಾದಗಳು ನಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ಜೈ ಶ್ರೀರಾಮ್​ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಈ ದೀಪಾವಳಿಯನ್ನು ಭಾರತೀಯರ ಪರಿಶ್ರಮದ ಹಬ್ಬವನ್ನಾಗಿ ಆಚರಿಸೋಣ: ಪ್ರಧಾನಿ ಮೋದಿ ಕರೆ

    ಈ ಬಾರಿಯ ವಿಶ್ವಕಪ್​ ಆವೃತ್ತಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ರಚಿನ್​ ರವೀಂದ್ರ ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲೆಂಡ್​​ಗೆ ತೆರಳಿದ್ದರು ಬಳಿಕ ಅಲ್ಲಿಯೇ ನೆಲೆಸಿದ್ದಾರೆ.

    ಪ್ರಸಕ್ತ ಏಕದಿನ ವಿಶ್ವಕಪ್​ ಅಭಿಯಾನದಲ್ಲಿ ನ್ಯೂಜಿಲೆಂಡ್ ಪರ 9 ಪಂದ್ಯಗಳನ್ನು ಆಡಿರುವ ರಚಿನ್​ 70.62ರ ಸರಾಸರಿಯಲ್ಲಿ 565ರನ್​ಗಳಿಸುವ ಮೂಲಕ ಅತಿಹೆಚಚು ರನ್​ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts