More

    ಬೆಂಗಳೂರಿಗೆ ಬಂದ ರಚಿನ್​ಗೆ ದೃಷ್ಟಿ ತೆಗೆದ ಅಜ್ಜಿ; ವಿಡಿಯೋ ವೈರಲ್

    ಬೆಂಗಳೂರು: ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ತಂಡದ ಪರ ಅಮೋಘ ಪ್ರದರ್ಶನದ ಮೂಲಕ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್​ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ.

    ಈ ಬಾರಿಯ ವಿಶ್ವಕಪ್​ ಆವೃತ್ತಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ರಚಿನ್​ ರವೀಂದ್ರ ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲೆಂಡ್​​ಗೆ ತೆರಳಿದ್ದರು ಬಳಿಕ ಅಲ್ಲಿಯೇ ನೆಲೆಸಿದ್ದಾರೆ.

    ಇದನ್ನೂ ಓದಿ: ಈ ದೀಪಾವಳಿಯನ್ನು ಭಾರತೀಯರ ಪರಿಶ್ರಮದ ಹಬ್ಬವನ್ನಾಗಿ ಆಚರಿಸೋಣ: ಪ್ರಧಾನಿ ಮೋದಿ ಕರೆ

    ಗುರುವಾರ (ನವೆಂಬರ್ 09) ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ನಡೆದ ಏಕದಿನ ವಿಶ್ವಕಪ್​ ಪಂದ್ಯವಿತ್ತು. ಈ ವೇಳೆ ರಚಿನ್​ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿ ಮೆನೆಗೆ ಭೇಟಿ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ರಚಿನ್​ ಅವರ ಅಜ್ಜಿಯ ಕೈಯಿಂದ ದೃಷ್ಟಿಯನ್ನು ತೆಗೆಸಿಕೊಳ್ಳುತ್ತಿರುವುದನ್ನು ನೋಡಬಹುದಾಗಿದೆ. ಇದನ್ನು ನೋಡಿರುವ ನೆಟ್ಟಿಗರು ವಿದೇಶದಲ್ಲಿದ್ದರು ಈಗಲೂ ನಮ್ಮ ಸಂಸ್ಕೃತಿಯನ್ನು ಮರೆಯದಿರುವುದು ಖುಷಿ ಪಡುವ ಸಂಗತಿ ಎಂದು ಕಮೆಂಟ್​ ಮಾಡಿದ್ದಾರೆ.

    ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ 9 ಪಂದ್ಯಗಳನ್ನು ಆಡಿರುವ ನ್ಯೂಜಿಲೆಂಡ್​ 5 ಪಂದ್ಯದಲ್ಲಿ ಗೆದ್ದು, 4ರಲ್ಲಿ ಸೋಲುಂಡಿದೆ. ಈಗಾಗಲೇ ನ್ಯೂಜಿಲೆಂಡ್​ ತಂಡಕ್ಕೆ ಸೆಮೀಸ್​ ಟಿಕೆಟ್​ ಬಹುತೇಕ ಖಚಿತವಾಗಿದ್ದು, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಗೆಲುವಿನ ಅಮತರದ ಮೇಲೆ ನ್ಯೂಜಿಲೆಂಡ್​ ಸೆಮೀಸ್​ ಭವಿಷ್ಯ ನಿರ್ಧಾರವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts