ಬೆಂಗಳೂರು: ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡದ ಪರ ಅಮೋಘ ಪ್ರದರ್ಶನದ ಮೂಲಕ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ.
ಈ ಬಾರಿಯ ವಿಶ್ವಕಪ್ ಆವೃತ್ತಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ರಚಿನ್ ರವೀಂದ್ರ ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲೆಂಡ್ಗೆ ತೆರಳಿದ್ದರು ಬಳಿಕ ಅಲ್ಲಿಯೇ ನೆಲೆಸಿದ್ದಾರೆ.
ಇದನ್ನೂ ಓದಿ: ಈ ದೀಪಾವಳಿಯನ್ನು ಭಾರತೀಯರ ಪರಿಶ್ರಮದ ಹಬ್ಬವನ್ನಾಗಿ ಆಚರಿಸೋಣ: ಪ್ರಧಾನಿ ಮೋದಿ ಕರೆ
ಗುರುವಾರ (ನವೆಂಬರ್ 09) ಶ್ರೀಲಂಕಾ ವಿರುದ್ಧ ಬೆಂಗಳೂರಿನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯವಿತ್ತು. ಈ ವೇಳೆ ರಚಿನ್ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿ ಮೆನೆಗೆ ಭೇಟಿ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ರಚಿನ್ ಅವರ ಅಜ್ಜಿಯ ಕೈಯಿಂದ ದೃಷ್ಟಿಯನ್ನು ತೆಗೆಸಿಕೊಳ್ಳುತ್ತಿರುವುದನ್ನು ನೋಡಬಹುದಾಗಿದೆ. ಇದನ್ನು ನೋಡಿರುವ ನೆಟ್ಟಿಗರು ವಿದೇಶದಲ್ಲಿದ್ದರು ಈಗಲೂ ನಮ್ಮ ಸಂಸ್ಕೃತಿಯನ್ನು ಮರೆಯದಿರುವುದು ಖುಷಿ ಪಡುವ ಸಂಗತಿ ಎಂದು ಕಮೆಂಟ್ ಮಾಡಿದ್ದಾರೆ.
ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 9 ಪಂದ್ಯಗಳನ್ನು ಆಡಿರುವ ನ್ಯೂಜಿಲೆಂಡ್ 5 ಪಂದ್ಯದಲ್ಲಿ ಗೆದ್ದು, 4ರಲ್ಲಿ ಸೋಲುಂಡಿದೆ. ಈಗಾಗಲೇ ನ್ಯೂಜಿಲೆಂಡ್ ತಂಡಕ್ಕೆ ಸೆಮೀಸ್ ಟಿಕೆಟ್ ಬಹುತೇಕ ಖಚಿತವಾಗಿದ್ದು, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಗೆಲುವಿನ ಅಮತರದ ಮೇಲೆ ನ್ಯೂಜಿಲೆಂಡ್ ಸೆಮೀಸ್ ಭವಿಷ್ಯ ನಿರ್ಧಾರವಾಗಲಿದೆ.