More

    ಸಿಸಿಬಿ ವಿಚಾರಣೆ ಬಳಿಕ ರಾಧಿಕಾ ಹೇಳಿದ್ದೇನು?

    ಬೆಂಗಳೂರು: ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಸತತ ನಾಲ್ಕು ಗಂಟೆ ಕಾಲ ಸಿಸಿಬಿ ವಿಚಾರಣೆ ಎದುರಿಸಿ ಹೊರ ಬಂದಿದ್ದಾರೆ.

    ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್​ ಅಲಿಯಾಸ್​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಯುವರಾಜ್​ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ಗುರುವಾರ ನೋಟಿಸ್​ ಕೊಟ್ಟಿಟ್ಟರು. ಇದನ್ನೂ ಓದಿರಿ ರಾಧಿಕಾಗೆ ನುಂಗಲಾರದ ತುತ್ತಾದ 3 ವಿಷಯಗಳಿವು: ಈ ಆಯಾಮದಲ್ಲೇ ನಡೆಯುತ್ತಿದೆ ಸಿಸಿಬಿ ವಿಚಾರಣೆ!?

    ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ತನ್ನ ಅಣ್ಣನ ಜತೆ ಸಿಸಿಬಿ ಕಚೇರಿಗೆ ಹಾಜರ್​ ಆದ ರಾಧಿಕಾ ಕುಮಾರಸ್ವಾಮಿ, ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.

    ವಿಚಾರಣೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಿಕಾ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೀನಿ. ಮತ್ತೆ ವಿಚಾರಣೆಗೆ ಕರೆದರು ಬರುವೆ ಎಂದರು.

    ಮಹಾ ವಂಚಕನ ಮೊಬೈಲ್​ನಲ್ಲಿ ನಟಿಯರು, ಮಾಡೆಲ್​ಗಳ 108 ಫೋಟೋ ಪತ್ತೆ: ಇದರ ಹಿಂದಿನ ಉದ್ದೇಶವೇನು?

    ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts