ಸಿಂಧಿಯಾ ಪಕ್ಷ ಬಿಟ್ಟು ಹೋದ ಬೆನ್ನಲ್ಲೇ ಆರ್ಥಿಕತೆ ವಿಚಾರವಿಟ್ಟುಕೊಂಡು ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ..

ನವದೆಹಲಿ: ಮಧ್ಯಪ್ರದೇಶದಲ್ಲಿ ಇಷ್ಟೆಲ್ಲ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದರೂ ಸುಮ್ಮನೆ ಇದ್ದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಆಪ್ತರಲ್ಲಿ ಓರ್ವರೆನಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ನಿನ್ನೆ ತಮ್ಮ ರಾಜೀನಾಮೆ ಪತ್ರವನ್ನು ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಅದಾದ ಕೆಲವೇ ಕ್ಷಣಗಳಲ್ಲಿ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿದ್ದರು. ಜ್ಯೋತಿರಾದಿತ್ಯ ಸಿಂಧ್ಯಾ ಜತೆ 22 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಪತನವಾಗಿ, ಕಮಲ ಅರಳುವುದು ಬಹುತೇಕ ನಿಶ್ಚಿತವಾಗಿದೆ. ವಾರಗಳಿಂದಲೂ ರಾಜಕೀಯ ನಾಟಕಗಳು ನಡೆಯುತ್ತಲೇ ಇದ್ದರೂ ಮೌನವಹಿಸಿದ್ದ … Continue reading ಸಿಂಧಿಯಾ ಪಕ್ಷ ಬಿಟ್ಟು ಹೋದ ಬೆನ್ನಲ್ಲೇ ಆರ್ಥಿಕತೆ ವಿಚಾರವಿಟ್ಟುಕೊಂಡು ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ..