ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿರುವ ಬೆನ್ನಲ್ಲೇ ರಾಜಕೀಯವಾಗಿ-ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ಎಐಸಿಸಿ ಪ್ರತಿಕ್ರಿಯಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅದಾನಿ ಸಮೂಹ ಸಂಸ್ಥೆಗಳ ಹಗರಣಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ(JPC) ತನಿಖೆಯ ಬದಲಿಗೆ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಲಾಗಿದೆ. ಈ ರೀತಿಯ ಕ್ರಮಗಳಿಂದ ವಿರೋಧ ಪಕ್ಷಗಳ ಧ್ವನಿಯನ್ನ ಹತ್ತಿಕ್ಕಲು ಸಾಧ್ಯವಿಲ್ಲ ಇದನ್ನ ನಾವು ರಾಜಕೀಯವಾಗಿ-ಕಾನೂನಾತ್ಮಕವಾಗಿ ಹೋರಾಟ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರದ ಈ ಕ್ರಮದಿಂದ ತಾವು ದಿಗ್ಭ್ರಮೆಗೊಂಡಿರುವುದಾಗಿ ಹೇಳಿದ್ದಾರೆ. ಈ ರೀತಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಇದನ್ನು ಓದಿ: ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಪಕ್ಷಗಳ ನಾಯಕರು ಪೊಲೀಸ್ ವಶಕ್ಕೆ
ಇದನ್ನು ಓದಿ: SC-ST ಮೀಸಲಾತಿ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ; ಪೊಲೀಸ್ ವಶಕ್ಕೆ