ನವದೆಹಲಿ: ಕರೊನಾ ಸೋಂಕು ನಿಯಂತ್ರಣ, ಚೀನಾ ಗಡಿ ಬಿಕ್ಕಟ್ಟು ಸೇರಿ ಹಲವು ವಿಷಯಗಳಲ್ಲಿ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುತ್ತಲೇಬಂದಿದ್ದಾರೆ.
ಹಾಗೇ ಇಂದು 2 ಪ್ರಮುಖ ಕೃಷಿ ಮಸೂದೆಗಳು ಪಾಸ್ ಆಗುತ್ತಿದ್ದಂತೆ ಮತ್ತೊಮ್ಮೆ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ರೈತರ ವಿರುದ್ಧ ಡೆತ್ ವಾರೆಂಟ್ ಹೊರಡಿಸಿದ್ದು, ಇದು ಪ್ರಜಾಪ್ರಭುತ್ವಕ್ಕೇ ಅವಮಾನ ಎಂದು ಹೇಳಿದ್ದಾರೆ. ರೈತರು ತಮ್ಮ ಕೃಷಿ ಕ್ಷೇತ್ರದಲ್ಲಿ ಬಂಗಾರವನ್ನು ಬೆಳೆಯುತ್ತಾರೆ. ಆದರೆ ಮೋದಿ ಸರ್ಕಾರ ರೈತರು ರಕ್ತ ಕಣ್ಣೀರು ಸುರಿಸುವಂತೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕರೊನಾ ಟೆಸ್ಟಿಂಗ್ ಟಾರ್ಗೆಟ್ ತಲುಪಲು ಈ ವೈದ್ಯ ಮಾಡಿದ್ದೇನು ಗೊತ್ತಾ? ಇದೊಂದು ಶಾಕಿಂಗ್ ಘಟನೆ
‘ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ-2020’ಹಾಗೂ ‘ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತರಿಯ ಒಪ್ಪಂದ ಮತ್ತು ಕೃಷಿ ಸೇವಾ ಮಸೂದೆ-2020’ ಈ ಎರಡೂ ಮಸೂದೆಗಳು ಕೃಷಿ ವಿರೋಧಿಯಾಗಿವೆ. ಕೃಷಿ ಕ್ಷೇತ್ರಕ್ಕೆ ಕಪ್ಪುಚುಕ್ಕೆಯಂತೆ ಎಂದು ಹೇಳಿದ್ದ ರಾಹುಲ್ ಗಾಂಧಿ ಇದೀಗ ಮತ್ತೆ ಕೇಂದ್ರ ಸರ್ಕಾರವನ್ನು ದೂಷಿಸಿದ್ದಾರೆ. ಮೋದಿ ಸರ್ಕಾರ ರೈತರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸುತ್ತಿದೆ ಎಂದೂ ಆರೋಪಿಸಿದ್ದಾರೆ. (ಏಜೆನ್ಸೀಸ್)
ಕೃಷಿ ಮಸೂದೆಗಳು ಅನುಮೋದನೆಗೊಂಡ ಬೆನ್ನಲ್ಲೇ ಪ್ರಧಾನಿಯಿಂದ ಭರವಸೆ; ಎಂಎಸ್ಪಿಗೆ ಇಲ್ಲ ನಿರ್ಬಂಧ