ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟ ರ್ಯಾಲಿಯಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ. ಈ ಕುರಿತು ಟ್ಟೀಟ್ ಮಾಡಿರುವ ಜೈರಾಮ್ ರಮೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉತ್ತರಪ್ರದೇಶ: ಎಕ್ಸಾಂ ಬರೆದ 188 ಕೈದಿಗಳು, ಶೇಕಡಾ 89 ರಷ್ಟು ಫಲಿತಾಂಶ ದಾಖಲು!
ಇಂದು ಮಧ್ಯಪ್ರದೇಶ ಮತ್ತು ಜಾರ್ಖಂಡ್ನಲ್ಲಿ ನಡೆಯುವ ಇಂಡಿಯಾ ಮೈತ್ರಿಕೂಟ ರ್ಯಾಲಿಯಲ್ಲಿ ಭಾಗವಹಿಸಲು ಸಿದ್ಧವಾಗಿದ್ದರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿಸಿದ್ದಾರೆ. ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್ನ ರಾಂಚಿಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ಬೃಹತ್ ರ್ಯಾಲಿ ನಡೆಸಲಿದ್ದಾರೆ.
श्री राहुल गांधी आज सतना और रांची में चुनाव प्रचार के लिए पूरी तरह से तैयार थे, जहां INDIA की रैली हो रही है। लेकिन वह अचानक बीमार हो गए हैं और फिलहाल नई दिल्ली से बाहर नहीं जा सकते हैं। कांग्रेस अध्यक्ष श्री मल्लिकार्जुन खरगे जी अवश्य सतना में जनसभा को संबोधित करने के बाद रांची…
— Jairam Ramesh (@Jairam_Ramesh) April 21, 2024
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಪ್ರದೇಶ ಸತ್ನಾದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ಜಾರ್ಖಂಡ್ ರಾಜಧಾನಿಯಲ್ಲಿ ಆಪ್ ಮೈತ್ರಿಕೂಟದ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದ ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದರು ಮತ್ತು ಸದ್ಯಕ್ಕೆ ದೆಹಲಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಂಚಿ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.
ದಿಲ್ಲಿ ಸಿಎಂ ಕ್ರೇಜಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಯಾದವ್ ಸೇರಿದಂತೆ ಇಂಡಿಯಾ ಬ್ಲಾಕ್ನ ಹಲವಾರು ನಾಯಕರು ರಾಂಚಿಯಲ್ಲಿ ನಡೆಯುವ ಉಲ್ಗುಲನ್ (ದಂಗೆ) ನ್ಯಾಯ ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಭಾರತ ಬ್ಲಾಕ್ ನಾಯಕರ ಪೋಸ್ಟರ್ಗಳು ರಾಂಚಿಯಲ್ಲಿ ಮೆಗಾ ರ್ಯಾಲಿ ಪ್ರದೇಶಗಳಲ್ಲಿ ರಾರಾಜಿಸುತ್ತಿವೆ.
ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ರ್ಯಾಲಿಯಲ್ಲಿ 5 ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ರ್ಯಾಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಆಯೋಜನೆ ಮಾಡಿದೆ.
ಬೆಂಗಳೂರಿನಲ್ಲಿ ಭದ್ರತಾ ಲೋಪ: ಮೋದಿಗೆ ಚೊಂಬು ಪ್ರದರ್ಶಿಸಲು ಬಂದ ನಲಪಾಡ್