More

    ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಕುಂಟು ನೆಪ

    ರಾಯಚೂರು: ರೈತ ವಿರೋಧಿ ಮೂರು ಕಾಯ್ದೆಗಳನ್ನು ಹಿಂಪಡೆಯುವ ನೈತಿಕತೆಯನ್ನು ರಾಜ್ಯ ಸರ್ಕಾರ ಪ್ರದರ್ಶಿಸುತ್ತಿಲ್ಲ. ಬದಲಾಗಿ ಕುಂಟು ನೆಪಗಳನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮಾ.28ರಂದು ರೈತ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.

    ರೈತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕಾಯ್ದೆಗಳನ್ನು ಹಿಂಪಡೆಯಲು ಮುಂದಾಗುತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಬಿಜೆಪಿ ಸರ್ಕಾರ ರೈತರನ್ನು ಒಕ್ಕಲೆಬ್ಬಿಸಲು ಕಾರ್ಪೋರೇಟ್ ಕಂಪನಿಗಳಿಗೆ ಪೂರಕವಾಗಿ ಕಾಯ್ದೆಗಳನ್ನು ರೂಪಿಸಿದೆ. ಪಕ್ಷದ ಹೈಕಮಾಂಡ್ ಸೂಚಿಸುವವರೆಗೆ ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ ಎಂದು ಸಚಿವರೊಬ್ಬರು ಹೇಳುತ್ತಿದ್ದಾರೆ. ಹಿಜಾಬ್ ಸೇರಿದಂತೆ ಇಲ್ಲದ ವಿಷಯಗಳನ್ನು ಜನರ ಚರ್ಚೆಗೆ ಬಿಟ್ಟು ಜನರ ಬದುಕಿನ ಪ್ರಶ್ನೆಗಳನ್ನು ಮರೆಮಾಚಲಾಗುತ್ತಿದೆ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts