More

    ಕ್ಷಮೆ ಕೋರಿದವರು ಸ್ವಾತಂತ್ರ್ಯ ಹೋರಾಟಗಾರರೇ..?; ಮಾಜಿ ಸಚಿವ ಎಚ್.ಎಂ.ರೇವಣ್ಣ ಪ್ರಶ್ನೆ

    ರಾಯಚೂರು: ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದವರು ಸ್ವಾತಂತ್ರ್ಯ ಹೋರಾಟಗಾರರಾಗಲು ಹೇಗೆ ಸಾಧ್ಯ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಪ್ರಶ್ನಿಸಿದರು.

    ಮಂತ್ರಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವೀರ ಸಾವರ್ಕರ್ ಕಠಿಣ ಶಿಕ್ಷೆ ಅನುಭವಿಸಿದ್ದು, ಕ್ಷಮೆ ಕೋರಿ ಬ್ರಿಟಿಷರಿಗೆ ಐದು ಬಾರಿ ಪತ್ರ ಬರೆದಿದ್ದರು. ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನಿಸುವ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ. ಹಿಂದು ಮಹಾಸಭಾ ಬೆಂಬಲಿಸಿದವರು ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕುರಿತು ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಣುಶಕ್ತಿ, ನೀರಾವರಿ ಯೋಜನೆಗಳು ಸೇರಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಿದೆ. ದೇಶ ವಿಶ್ವಮಾನ್ಯವಾಗಲು ಕಾಂಗ್ರೆಸ್ ಕಾರಣ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts