ಸರ್ಕಾರಿ ನೌಕರರ ಸಂಘಕ್ಕೆ ಕೃಷ್ಣ ಜಿಲ್ಲಾಧ್ಯಕ್ಷ

blank

ರಾಯಚೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಬುಧವಾರ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಯಿತು.

ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಕೃಷ್ಣ, ಕೆ.ಆಂಜನೇಯ್ಯ, ಮಹಾಂತೇಶ ಬಿರಾದಾರ ಕಣದಲ್ಲಿದ್ದರು. ಕೃಷ್ಣ 43 ಮತಗಳನ್ನು ಪಡೆದು ಜಯಗಳಿಸಿದರೆ, ಮಹಾಂತೇಶ 22 ಮತಗಳು ಆಂಜನೇಯ್ಯ 6 ಮತಗಳನ್ನು ಪಡೆದು ಸೋತರು.

ಖಜಾಂಚಿ ಸ್ಥಾನಕ್ಕಾಗಿ ಕಣದಲ್ಲಿದ್ದ ಪ್ರಸನ್ನಕುಮಾರ 45 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಖಲೀಲ 18 ಹಾಗೂ ರಾಜಶೇಖರ್ 08 ಮತಗಳನ್ನು ಪಡೆದಿದ್ದರು.
ರಾಜ್ಯ ಪರಿಷತ್ ಸದಸ್ಯ ಸ್ಥಾನದ ಚುನಾವಣಾ ಅಭ್ಯಾರ್ಥಿಗಳಾದ ಎಹಸಾನ್ ಉಲ್ ಹಕ್ 39 ಮತಗಳನ್ನು ಪಡೆದು ಗೆದ್ದರೆ, ವೆಂಕಟಾಚಲ 23 ಹಾಗೂ ಡಿ.ವೆಂಕಟೇಶ 9 ಮತಗಳನ್ನು ಪಡೆದು ಸೋತರು.

ಫಲಿತಾಂಶವನ್ನು ಚುನಾವಣಾಧಿಕಾರಿ ಭೀಮಣ್ಣ ನಾಯಕ ಘೋಷಿಸಿದರು. ಗೆದ್ದ ಅಭ್ಯರ್ಥಿಗಳ ಪರ ನೌಕರರು ಅಭ್ಯರ್ಥಿಗಳನ್ನು ಹೊತ್ತು, ಪಟಾಕಿ ಸಿಡಿಸಿ ಸಂಭ್ರಮಿಸಿದರು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…