More

    ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ

    ರಾಯಚೂರು: ಕಲಬುರಗಿ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕುರುಬ ಸಂಘದಿಂದ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

    ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ಈ ಕೃತ್ಯ ಎಸಗಿರುವುದು ಅತ್ಯಂತ ಹೀನಾಯ. ಘಟನೆಯಿಂದ ಸಮಾಜವೇ ತಲೆ ತಗ್ಗಿಸುವಂತಾಗದೆ. ಆರೋಪಿಯನ್ನು ತಕ್ಷಣವೇ ಬಂಧಿಸಿ, ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು. ತಾಲೂಕಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ರಮೇಶ ಉಪ್ರಾಳ್, ಪದಾಧಿಕಾರಿಗಳಾದ ನರಸಿಂಹಲು, ರಾಮನಗೌಡ, ಸೇರಿದಂತೆ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts