ರಾಯಚೂರು: ಕಲಬುರಗಿ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕುರುಬ ಸಂಘದಿಂದ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ಈ ಕೃತ್ಯ ಎಸಗಿರುವುದು ಅತ್ಯಂತ ಹೀನಾಯ. ಘಟನೆಯಿಂದ ಸಮಾಜವೇ ತಲೆ ತಗ್ಗಿಸುವಂತಾಗದೆ. ಆರೋಪಿಯನ್ನು ತಕ್ಷಣವೇ ಬಂಧಿಸಿ, ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು. ತಾಲೂಕಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ರಮೇಶ ಉಪ್ರಾಳ್, ಪದಾಧಿಕಾರಿಗಳಾದ ನರಸಿಂಹಲು, ರಾಮನಗೌಡ, ಸೇರಿದಂತೆ ಇನ್ನಿತರರಿದ್ದರು.