More

    ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿಯಾಗಲಿ

    ರಾಯಚೂರು: ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸೇರಿ ಅನೇಕ ವಲಯಗಳಲ್ಲಿ ವೈವಿಧ್ಯ ಕಾಣಬಹುದು. ಆದರೆ ಮತದಾನದಲ್ಲಿ ವಿಚಾರದಲ್ಲಿ ಪ್ರತಿಯೊಬ್ಬರಲ್ಲಿ ಏಕತೆ ಇದ್ದು, ಮತದಾನ ಹಕ್ಕಿನಿಂದ ಯಾರೂ ದೂರ ಉಳಿಯಂತೆ ನೋಡಿಕೊಳ್ಳಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.

    ಇದನ್ನೂ ಓದಿ: ಈಶಾನ್ಯ ಪದವೀಧರ ಮತದಾರ ಪಟ್ಟಿಗೆ ಅರ್ಜಿ ಸಲ್ಲಿಸಲು ಮಾಹಿತಿ

    ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಗುರುವಾರ ಮಾತನಾಡಿದರು. ಮತದಾರರ ನೋಂದಣಿ ಯಶಸ್ವಿಯಾದರೆ ಚುನಾವಣೆ ಪ್ರಕ್ರಿಯೆಯಲ್ಲಿ ಯಶಸ್ಸು ಕಾಣಲು ಸಾಧ್ಯ.

    ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿ ಮಾಡಿಸುವುದು ಹಾಗೂ ಮತದಾನದ ಕುರಿತು ಮಾಹಿತಿ ರವಾನಿಸಲು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

    ಮತದಾರರ ನೋಂದಣಿ ಅಭಿಯಾನದ ತರಬೇತುದಾರ ಸದಾಶಿವಪ್ಪ ಮಾತನಾಡಿ, ಮತದಾರರ ನೋಂದಣಿಗೆ ನ.6 ನೋಂದಣಿಗೆ ಕೊನೆಯ ದಿನವಾಗಿದೆ ಎಂದು ತಿಳಿಸಿ, ನೋಂದಣಿ ಪ್ರಕ್ರಿಯೆಗೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts