More

    ಪೌಷ್ಟಿಕತೆ ಕುರಿತು ಜಾಗೃತಿ ಅಗತ್ಯ

    ರಾಯಚೂರು: ಅಪೌಷ್ಟಿಕತೆ ಅಂತಾರಾಷ್ಟ್ರೀಯ ಸಮಸ್ಯೆಯಾಗಿದ್ದು, ಪೌಷ್ಟಿಕಾಂಶದ ಕೊರತೆ ಬಡವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಪೋಷಕಾಂಶಯುಕ್ತ ಆಹಾರ ನೀಡಲು ಹಾಗೂ ಅದರ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು.

    ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಬುಧವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಸಮಾರೋಪದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರಿಗೆ ಜಾಗೃತಿ ಅವಶ್ಯಕತೆಯಿದ್ದು, ಪೌಷ್ಟಿಕಾಂಶದ ಕೊರತೆ ನೀಗಿಸಲು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂಪೂರ್ಣ ಸಹಕಾರವಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ಜಿಲ್ಲೆಯನ್ನು ಮಹತ್ವಾಕಾಂಕ್ಷೆಯ ಜಿಲ್ಲೆಯೆಂದು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಪೌಷ್ಟಿಕತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪೌಷ್ಟಿಕ ಆಹಾರ ನೀಡುವುದು ಎಲ್ಲರ ಜವಾಬ್ದಾರಿ. ಅಂಗನವಾಡಿ ಕಾರ್ಯಕರ್ತೆಯರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts