More

    ಎಕರೆಗೆ 40 ಸಾವಿರ ರೂ. ಪರಿಹಾರ ಕೊಡಿ


    ರಾಯಚೂರು: ಮುಂಗಾರು ಮಳೆ ವೈಫಲ್ಯದಿಂದಾಗಿ ರೈತರು ಬಿತ್ತನೆ ಮಾಡಲು ಸಾಧ್ಯವಾಗದಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

    ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಸಂಘದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿ, ರೈತರಿಗೆ ನಷ್ಟ ಪರಿಹಾರವಾಗಿ ಪ್ರತಿ ಎಕರೆಗೆ 40 ಸಾವಿರ ರೂ. ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

    ತಡವಾಗಿ ಬಿತ್ತನೆ ಮಾಡುವುದರಿಂದ ಹತ್ತಿ, ತೊಗರಿ ನಾಟಿ ಮಾಡಿದರೂ ಮೊಳಕೆ ಬರುವುದಿಲ್ಲ. ರೋಗ ಮತ್ತು ಕೀಟಭಾದೆಯಿಂದ ಬೆಳೆ ಹಾನಿಗೊಳಗಾಗುವ ಸಂಭವ ಹೆಚ್ಚಾಗಿರುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts