More

    ಪೋತಗಲ್ ಶಾಲೆಗೆ ಶಿಕ್ಷಕರನ್ನು ನಿಯೋಜಿಸಿ; ಮಾದಿಗ ದಂಡೋರದಿಂದ ಪ್ರತಿಭಟನೆ


    ರಾಯಚೂರು: ನಗರದ ಪೋತಗಲ್ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮಾದಿಗ ದಂಡೋರ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

    ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿತು. ಒಂದರಿಂದ 5ನೇ ತರಗತಿವರೆಗೆ ಇರುವ ಶಾಲೆಯಲ್ಲಿ ಒಬ್ಬ ಶಿಕ್ಷಕನೂ ಇಲ್ಲ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತವಾಗುವಂತಾಗಿದೆ. ಶಾಲೆಯಲ್ಲಿ ಹಿಂದೆ ಇಬ್ಬರು ಶಿಕ್ಷಕರಿದ್ದರು. ಒಬ್ಬರು ಮುಂಬಡ್ತಿ ಹೊಂದಿ ಬೇರೆಡೆ ಹೋಗಿದ್ದರೆ, ಮತ್ತೊಬ್ಬ ಶಿಕ್ಷಕಿ ಯರಮರಸ್ ಕ್ಯಾಂಪ್ ಶಾಲೆಗೆ ಎರವಲು ಸೇವೆ ಮೇಲೆ ಹೋಗಿದ್ದಾರೆ. ಇದರಿಂದ ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಪಾಠ ಮಾಡುವವರಿಲ್ಲದಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಕೂಡಲೇ ಶಾಲೆಗೆ ಅಗತ್ಯ ಶಿಕ್ಷಕರನ್ನು ನಿಯೋಜನೆ ಮಾಡಬೇಕು. ಪಠ್ಯಪುಸ್ತಕ, ಸಮವಸ್ತ್ರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ಎರವಲು ಸೇವೆಗೆ ಹೋಗಿರುವ ಶಿಕ್ಷಕರನ್ನು ಮಾತೃ ಶಾಲೆಗೆ ಕಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts