More

    ರಾಯಚೂರಲ್ಲಿ ರವಿಶಂಕರ ಗುರೂಜಿಯವರ ಸತ್ಸಂಗ ನಾಳೆ

    ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ 6ಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ರವಿಶಂಕರ ಗುರೂಜಿಯವರ ಜ್ಞಾನ, ಧ್ಯಾನ ಮತ್ತು ಸತ್ಸಂಗದ ಕಲ್ಯಾಣ ಕರ್ನಾಟಕ ಮಹೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಸಮಿತಿ ಸದಸ್ಯ ಬಸವರಾಜ ಕಳಸ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಬೆಳಗ್ಗೆ 11ಕ್ಕೆ ಕೃಷಿ ವಿವಿಯ ಪ್ರೇಕ್ಷಾಗೃಹದಲ್ಲಿ ರೈತರು, ಕೃಷಿ ವಿಜ್ಞಾನಿಗಳು, ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಕೃಷಿ ಕ್ಷೇತ್ರ ಎದುರಿಸುತ್ತಿರುವ ಬಿಕ್ಕಟ್ಟು, ಪರಿಹಾರಗಳ ಬಗ್ಗೆ ಮಾತನಾಡಲಿದ್ದಾರೆ. ಸಂಜೆ 4ಕ್ಕೆ ರೇಸ್ ಕಾನ್ಸೆಪ್ಟ್ ಶಾಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಖಿನ್ನತೆ ನಿವಾರಣೆಗೆ ಸಲಹೆ ನೀಡಲಿದ್ದಾರೆ.

    ಸಂಜೆ 6ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಸರ್ವಧರ್ಮ ಗುರುಗಳು ಪಾಲ್ಗೊಳ್ಳಲಿದ್ದಾರೆ. ಸಂಗೀತ, ನೃತ್ಯ ಪ್ರದರ್ಶನ ಜರುಗಲಿದ್ದು, ಗುರೂಜಿ ಯೋಗದ ಮಹತ್ವ, ಆಹಾರ ಸಂಸ್ಕೃತಿ, ಆಚಾರ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

    ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ರಾತ್ರಿ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆ ಸೇರಿ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 8 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಬಸವರಾಜ ಕಳಸ ತಿಳಿಸಿದರು. ಈ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪದಾಧಿಕಾರಿಗಳಾದ ಮೈಲಾಪುರ ರಾಘವೇಂದ್ರ, ಜಟ್ರಂ ಗೋವಿಂದರಾಜ, ರಮೇಶಚಂದ್ ಜೈನ್, ಯೋಗ ತರಬೇತುದಾರ ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts