ರಾಯಚೂರು: ಮಹಿಳಾ ಪಿಎಸ್ಐ ಕಿರುಕುಳ ತಾಳಲಾರದೇ ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಸಿರವಾರದಲ್ಲಿ ನಡೆದಿದೆ. ತಾಯಣ್ಣ ನೀಲಗಲ್ ನಾಪತ್ತೆಯಾದ ಯುವಕ.
ಸಿರವಾರ ಠಾಣೆಯ ಪಿಎಸ್ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ತಾಯಣ್ಣ ಆರೋಪ ಮಾಡಿದ್ದಾನೆ.
ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿದ್ದ ಆರೋಪವನ್ನು ತಾಯಣ್ಣ ಹೊತ್ತಿದ್ದ. ದೂರು ನೀಡಿದ ಹಿನ್ನೆಲೆಯಲ್ಲಿ ನಿನ್ನೆ (ಡಿ.02) ತಾಯಣ್ಣನನ್ನು ಪಿಎಸ್ಐ ಗೀತಾಂಜಲಿ ಶಿಂಧೆ ಠಾಣೆಗೆ ಕರೆಸಿದ್ದರು. ಬಹಳ ಹೊತ್ತು ಲಾಕಪ್ನಲ್ಲಿ ಕೂರಿಸಿದ್ದರಿಂದ ಮನನೊಂದು ನಾಪತ್ತೆತಾಗಿರುವುದಾಗಿ ಯುವಕ ಡೆತ್ನೋಟ್ನಲ್ಲಿ ಉಲ್ಲೇಖಸಿದ್ದಾನೆ.
ಸದ್ಯ ನಾಪತ್ತೆಯಾಗಿರುವ ತಾಯಣ್ಣನ ವಿರುದ್ಧ 4 ಕ್ರಿಮಿನಲ್ ಹಾಗೂ 5 ಸಿವಿಲ್ ಪ್ರಕರಣಗಳಿರುವ ಮಾಹಿತಿ ಇದೆ.
ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರೇ ಕಾರಣ. ನನಗೆ ನಿರಂತರ ಕಿರುಕುಳ ನೀಡುತ್ತಿದ್ದು, ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಭಯಭೀತನಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಹೊರಗಡೆ ಹೋದಾಗಲೆಲ್ಲ ಜೀಪ್ ನಿಲ್ಲಿಸಿ, ನನಗೆ ಹೊಡೆದಂತಹ ಅನೇಕ ಪ್ರಸಂಗಗಳು ಇವೆ. ಅದನ್ನು ಈವರೆಗೂ ನಾನು ಯಾರಿಗೂ ಹೇಳಿಕೊಂಡಿರಲಿಲ್ಲ. ಇದೀಗ ನಾನು ಬಹಳಷ್ಟು ನೊಂದಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ನಿನ್ನೆ ಸಾಯಂಕಾಲ ನನ್ನನ್ನು ಠಾಣೆಗೆ ಕರೆಸಿದರು. ನಾನು ಮಾವನ ಮನೆಯಿಂದ ನೇರವಾಗಿ ಪೊಲೀಸ್ ಠಾಣೆಗೆ ಹೋದೆ. ಆದರೆ, ನನ್ನನ್ನು ವಿಚಾರಣೆ ಮಾಡದೇ ಲಾಕಪ್ನಲ್ಲಿ ಕೆಲ ಕಾಲ ಕೂರಿಸಿ ಹಿಂಸೆ ನೀಡಿದರು. ಸ್ವಲ್ಪ ಸಮಯದ ಬಳಿಕ ನನ್ನನ್ನು ಬಿಡುಗಡೆ ಮಾಡಿದರು. ಆದರೆ, ಯಾವುದೇ ವಿಚಾರಣೆ ಮಾತ್ರ ಮಾಡಲಿಲ್ಲ. ಇದರಿಂದ ನಾನು ಬಹಳ ನೊಂದಿದ್ದೇನೆ. ನನ್ನನ್ನು ಏಕಾಏಕಿ ಲಾಕಪ್ನಲ್ಲಿ ಹಾಕಿದ್ದಾರೆ. ಇದು ತುಂಬಾ ನೋವಾಗಿದೆ.
ಗೀತಾಂಜಲಿ ಅವರು ನನಗೆ 3 ತಿಂಗಳಿಂದ ತುಂಬಾ ಚಿತ್ರಹಿಂಸೆ ನೀಡುತ್ತಿದ್ದಾರೆ. ಯಾವ ದಾರಿಯಲ್ಲೂ ಕಂಡರೂ ಒದ್ದು ಒಳಗೆ ಹಾಕುತ್ತೇನೆ ಎಂದು ಬೆದರಿಸಿದ್ದಾರೆ. ಇದನ್ನು ನಾನು ಯಾರಿಗೂ ಹೇಳಲಾಗದೇ ಮನಸ್ಸಿನಲ್ಲೇ ಕೊರಗುತ್ತಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಎರಡು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿರುವ ತಾಯಣ್ಣ ಕೊನೆಯಲ್ಲಿ ನನ್ನ ಎಲ್ಲ ಕುಟುಂಬ ಸದಸ್ಯರನ್ನು ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೇ ನನ್ನ ಕೊನೆಯ ಬರಹ ನೋಡಿಕೊಳ್ಳಿ. ಮಿಸ್ ಯು ಅಮ್ಮ ಎಂದು ಬರೆದಿದ್ದಾನೆ. (ದಿಗ್ವಿಜಯ ನ್ಯೂಸ್)
ಪ್ರವಾಹದ ಜತೆಗೆ ಕಸ-ಕಡ್ಡಿ ಬರೋದು ಸಹಜ: ರೌಡಿ ರಾಜಕೀಯ ಕುರಿತು ಸಿಟಿ ರವಿ ವ್ಯಾಖ್ಯಾನ
ಪತಿಯ ಸ್ನೇಹಿತನ ಜತೆ 2ನೇ ಮದುವೆಗೆ ತಯಾರಿ! ನಟಿ ಮೀನಾ ಕೊಟ್ಟ ಸ್ಪಷ್ಟನೆ ಇಲ್ಲಿದೆ…
ಕಿರುತೆರೆ ಜೊತೆ ಹಿರಿತೆರೆ ಜೊತೆಯಲಿ; ಡಬಲ್ ರೈಡಿಂಗ್ನಲ್ಲಿ ತ್ರಿಬಲ್ ರೈಡಿಂಗ್ ಮೇಘಾ