More

    ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಶಿಕ್ಷಕ ಅಪಘಾತದಲ್ಲಿ ಸಾವು, ಮಗನಿಗೆ ಗಾಯ

    ರಾಯಚೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಆರಂಭಗೊಂಡಿದೆ. ಕರೊನಾ ಆತಂಕದಲ್ಲೇ ಪರೀಕ್ಷೆ ಎದುರಾಗಿದ್ದು, ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ಪಾಲಕರು ಹಾಗೂ ಶಿಕ್ಷಕರಿಗೂ ಮತ್ತಷ್ಟು ಒತ್ತಡ ತಂದಂತಾಗಿದೆ. ಇದರಿಂದಾಗಿ ಕೆಲ ಅನಾಹುತಕಾರಿ ಘಟನೆಗಳು ನಡೆದಿವೆ.

    ರಾಯಚೂರು ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಒಬ್ಬ ಶಿಕ್ಷಕ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಮಗ ಗಾಯಗೊಂಡಿದ್ದಾನೆ.  ಪರೀಕ್ಷೆಗೆ ತಂದೆಯ ಜೊತೆ ತೆರಳುತ್ತಿದ್ದ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.

     ಇದನ್ನೂ ಓದಿ: ಜುಲೈ 31ರ ವರೆಗೆ ಲಾಕ್​ಡೌನ್​; ಶಾಲಾ-ಕಾಲೇಜುಗಳು ಬಂದ್​; ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೆಲ್ಲಿ

    ರಾಯಚೂರಿನ ದೇವದುರ್ಗದ ಮೀಯಾಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ಗೆ ಆಕಳು ಅಡ್ಡ ಬಂದಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
    ನಾಗಿರೆಡ್ಡಿ (57) ಮೃತ ಶಿಕ್ಷಕ , ಮಗ ವಿಶ್ವನಾಥ್ ಗಾಯಗೊಂಡವ. ಪರೀಕ್ಷೆ ಬರೆಯಬೇಕಿದ್ದ ಆತ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ:ಈ ಸಂಸ್ಥೆಯಲ್ಲಿ ಈ ವರ್ಷ ತರಗತಿಗಳು ನಡೆಯಲ್ಲ…!

    ಸುಂಕೇಶ್ವರಾಳದ ಶಿಕ್ಷಕ ನಾಗಿರೆಡ್ಡಿಯನ್ನು ಮಸರಕಲ್ ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗಿತ್ತು. ಮಗನನ್ನು ದೇವದುರ್ಗದ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಬರಲು ಹೋಗುತ್ತಿದ್ದಾಗ ಅಪಘಾತದಲ್ಲಿ ಶಿಕ್ಷಕ ಸಾವಿಗೀಡಾಗಿದ್ದಾರೆ.  ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

    ಪದವಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯೂ ರದ್ದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts