ರಂಗಮಂದಿರ ನವೀಕರಣಕ್ಕೆ 2.5 ಕೋಟಿ ರೂ ಸಲ್ಲ

blank

ರಾಯಚೂರು: ನಗರದ ಪಂ.ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದ ನವೀಕರಣ ಕಾಮಗಾರಿಯನ್ನು 2.50 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿಯನ್ನು ಕ್ಯಾಷುಟೆಕ್ ಸಂಸ್ಥೆಗೆ ವಹಿಸಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.

2.50 ಕೋಟಿ ರೂ.ವೆಚ್ಚದಲ್ಲಿ ಹೊಸ ರಂಗಮಂದಿರ ನಿರ್ಮಿಸಬಹುದಾಗಿದ್ದು, ನವೀಕರಣಕ್ಕೆ ಅಷ್ಟೊಂದು ಅನುದಾನ ಬಳಕೆ ಮಾಡುತ್ತಿರುವುದು ಅನುಮಾನ ಮೂಡಿಸಿದೆ. 1997ರಲ್ಲಿ ಉದ್ಘಾಟನೆಗೊಂಡಿದ್ದ ರಂಗಮಂದಿರವನ್ನು 2016-17ನೇ ಸಾಲಿನಲ್ಲಿ ನವೀಕರಣ ಮಾಡಲಾಗಿತ್ತು. ಹೊಸದಾಗಿ ಆಸನ ಹಾಕಲಾಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಆಸನಗಳು ಮುರಿದು ಹೋದವು. ಅಂದು ನವೀಕರಣ ಮಾಡಿದ್ದ ಸಂಸ್ಥೆಗೆ ಪುನಃ ನವೀಕರಣ ಕಾಮಗಾರಿ ನೀಡಿರುವುದು ಸರಿಯಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕರು, ಸಂಸದರು ಹಾಗೂ ಹಿರಿಯ ಅಧಿಕಾರಿಗಳಿಗೆ ಹಣ ನೀಡಿದರೆ ಮಾತ್ರ ಕೆಲಸವಾಗುತ್ತಿದೆ ಎಂದು ಅಧಿಕಾರಿಗಳು ಬಹಿರಂಗವಾಗಿ ಹೇಳುತ್ತಿದ್ದಾರೆ. ರಂಗಮಂದಿರ ನವೀಕರಣದಲ್ಲಿಯೂ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಸಾಧ್ಯತೆಗಳಿದ್ದು, ಕ್ಯಾಷುಟೆಕ್‌ಗೆ ನೀಡಲಾಗಿರುವ ಕಾಮಗಾರಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಮಾತನಾಡಿ, ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಕ್ಯಾಷುಟೆಕ್ ಸಂಸ್ಥೆಗೆ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ರಂಗಮಂದಿರ ನವೀಕರಣ ಕಾಮಗಾರಿ ನೀಡಲಾಗಿದೆ. ಹಾರೋಬೂದಿಯಿಂದ ಉತ್ಪನ್ನ ತಯಾರಿಸಿ ಪೂರೈಕೆ ಮಾಡಬೇಕಾದ ಕ್ಯಾಷುಟೆಕ್‌ಗೆ ರಂಗಮಂದಿರ ನವೀಕರಣ ಕಾಮಗಾರಿ ವಹಿಸಲಾಗಿದೆ. ಶಾಸಕ ಡಾ.ಶಿವರಾಜ ಪಾಟೀಲ್ ಸಹೋದರ ಚನ್ನಪ್ಪಗೌಡ ಕ್ಯಾಷುಟೆಕ್ ಹೆಸರಿನಲ್ಲಿ ಗುತ್ತಿಗೆ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಕರವೇ ಜಿಲ್ಲಾಧ್ಯಕ್ಷ ಅಶೋಕಕುಮಾರ ಜೈನ್, ಕಲಾವಿದರಾದ ಅಲ್ತಾಫ್ ರಂಗಮಿತ್ರ, ಬಸವರಾಜ ಮಿಮಿಕ್ರಿ ಉಪಸ್ಥಿತರಿದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…