ಸಂತ್ರಸ್ತರಿಗೆ ಮನೆಗಳ ಹಕ್ಕು ಪತ್ರ ವಿತರಿಸಿ

blank

ರಾಯಚೂರು: ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ನೆರೆ ಸಂತ್ರಸ್ತರಿಗೆ ಪುನರ್ ವಸತಿಯೋಜನೆಯಡಿ ಕಲ್ಪಿಸಿದ ಮನೆಗಳ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಫಲಾನುಭವಿಗಳಿಂದ ನಗರದ ಡಿಸಿ ಕಚೇರಿ ಮುಂದೆ ಕಚೇರಿ ಸ್ಥಾನಿಕ ಅಧಿಕಾರಿ ಪರಶುರಾಮಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಬಾರಿ ಮಳೆಯಿಂದಾಗಿ 2009ರಲ್ಲಿ ನೆರ ಹಾವಳಿ ಉಂಟಾಗಿ, ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಜನರು ಮನೆಗಳು ಕಳೆದುಕೊಂಡಿದ್ದರು. ಸೂರು ಕಳೆದುಕೊಂಡವರಿಗೆ ಸರ್ಕಾರದಿಂದ ಇದುವರೆಗೂ ಪನರ್ ವಸತಿ ಮನೆಗಳನ್ನು ಹಂಚಿಕೆ ಮಾಡಿಲ್ಲ. ಸರ್ವೆ ಮಾಡಿ ಗುರುತಿಸಿದ ಫಲಾನುಭವಿಗಳನ್ನು ಬಿಟ್ಟು ಹೊಸದಾಗಿ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ನೆರೆ ಸಂತ್ರಸ್ತರ ಮನೆಗಳನ್ನು ಹಂಚಲು ಹುನ್ನಾರ ನಡೆದಿದೆ ಎಂದು ಆರೋಪಿಸಲಾಯಿತು.

ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತಿಯಿಂದ ತಯಾರಿಸಲಾದ ಪಟ್ಟಿಯಲ್ಲಿ ಫಲಾನುಭವಿಗಳಿಗೆ ಮನೆಗಳನ್ನು ವಿತರಣೆ ಮಾಡುವಂತೆ ಕ್ರಮ ವಹಿಸಬೇಕು, ಸಂಬಂದಪಟ್ಟ ಅಧಿಕಾರಿಗಳು ಕೂಲಕುಂಷವಾಗಿ ಪರಿಶೀಲಿಸಿ ನೈಜ ಫಲಾನುಭವಿಗಳಿಗೆ ಮನೆಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಹನುಮಂತಪ್ಪ ಮನ್ನಾಪೂರ, ದೇವೇಂದ್ರಪ್ಪ, ಬಸವಗೌಡ, ಇಸ್ಮಾಯಿಲ್, ಬಸವರಾಜ, ಸುವರ್ಣಮ್ಮ, ಸಿದ್ದಲಿಂಗಮ್ಮ, ಯಲ್ಲಮ್ಮ, ಆದಪ್ಪ, ರಾಮಣ್ಣ ಸೇರಿದಂತೆ ಇತರರಿದ್ದರು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…