ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ಖಾಸಗಿ ಕಂಪನಿಯೊಂದಕ್ಕೆ ರೈಲ್ವೆ ಗುತ್ತಿಗೆ ಕೊಡಿಸುವುದಾಗಿ ಹೇಳಿ ಒಂದು ಕೋಟಿ ರೂಪಾಯಿ ದಂಡ ಸ್ವೀಕರಿಸಲಾಗಿತ್ತು ಎಂದು ತಿಳಿಸಲಾಗಿದೆ.
ಭಾರತೀಯ ರೈಲ್ವೆ ಎಂಜಿನಿಯರಿಂಗ್ ಸೇವೆಯ (ಐಆರ್ಇಎಸ್) ಹಿರಿಯ ಅಧಿಕಾರಿ ಮಹೇಂದರ್ ಸಿಂಗ್ ಚೌಹಾಣ್ ಬಂಧಿತ ಆರೋಪಿ. ಇವರು ಈಶಾನ್ಯ ಗಡಿನಾಡು ರೈಲ್ವೆ (ಎನ್ಎಫ್ಆರ್) ಯೋಜನೆಗಳ ಗುತ್ತಿಗೆ ಕೊಡಿಸುವುದಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಹೇಳಿದ್ದರು. ಅದಕ್ಕಾಗಿ ಒಂದು ಕೋಟಿ ರೂಪಾಯಿ ಲಂಚ ಕೊಡುವಂತೆ ಕೇಳಿದ್ದರು. ಲಂಚ ಪಡೆಯಲೆಂದು ಇಬ್ಬರು ಅಧಿಕಾರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಈ ವಿಚಾರ ಸಿಬಿಐಗೆ ತಿಳಿದುಬಂದಿದ್ದು, ಲಂಚ ಪಡೆಯಲು ನಿಗದಿಸಲಾಗಿದ್ದ ಸ್ಥಳದ ಮೇಲೆ ದಾಳಿ ನಡೆಸಲಾಗಿದೆ. ಆ ವೇಳೆ ಒಂದು ಕೋಟಿ ಲಂಚದೊಂದಿಗೆ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅವರ ಹೇಳಿಕೆಯ ಆಧಾರದ ಮೇಲೆ ಮಹೇಂದರ್ ಸಿಂಗ್ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಮಹೇಂದರ್ ಸಿಂಗ್ ಚೌಹಾಣ್ 1985 ರ ಬ್ಯಾಚ್ನ ಐಆರ್ಇಎಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಅಸ್ಸಾಂನ ಮಾಲಿಗಾಂವ್ನಲ್ಲಿರುವ ಎನ್ಎಫ್ಆರ್ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿದೆ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. (ಪಿಟಿಐ)
48 ಗಂಟೆಗಳಲ್ಲಿ 9 ಕಾಮುಕರಿಂದ 13 ಬಾರಿ ರೇಪ್: ನರಕಯಾತನೆ ಬಿಚ್ಚಿಟ್ಟ 9ನೇ ತರಗತಿ ವಿದ್ಯಾರ್ಥಿನಿ!