More

    ದ.ಕ ಜಿಲ್ಲಾದ್ಯಂತ ಮುಂದುವರಿದ ಮಳೆ, ತೋಡಾರಿನಲ್ಲಿ ಆಲದಮರ ಬಿದ್ದು ಹೆದ್ದಾರಿ ಸಂಚಾರ ವ್ಯತ್ಯಯ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ ಎಡೆಬಿಡದೆ ಸುರಿಯುತ್ತಿದೆ. ಗ್ರಾಮಾಂತರ, ಘಟ್ಟದ ತಪ್ಪಲಿನ ಭಾಗದಲ್ಲೂ ಮಳೆ ನಿರಂತರವಾಗಿದೆ.
    ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ನಡುವೆ ಮೂಡುಬಿದಿರೆ ತೋಡಾರಿನಲ್ಲಿ ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಆಲದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಅದೃಷ್ಟಾವಶಾತ್‌ ಈ ವೇಳೆ ಯಾವುದೇ ವಾಹನ ರಸ್ತೆಯಲ್ಲಿ ಸಂಚರಿಸುತ್ತಿರಲಿಲ್ಲ. ಆದರೆ ಮರದಡಿಯಲ್ಲಿದ್ದ ಅಬೂಬಕ್ಕರ್‌ ಎನ್ನುವವರ ಹಣ್ಣಿನ ಅಂಗಡಿ ಜಖಂಗೊಂಡಿದೆ. ಮರ ಬಿದ್ದು, ಬೆಳಗ್ಗಿನ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. ಪ್ರಸ್ತುತ ಪರಾಯ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts