ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೊಮ್ಮೆ ತಲೆದೂರಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ರಸ್ತೆ ಮತ್ತು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾಕಷ್ಟು ಆಸ್ತಿ-ಪಾಸ್ತಿ, ಬೆಳೆ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರಿ ನೆರೆ ಹಾವಳಿಗೆ ಉಡುಪಿ ನಗರದ ಜನ ಜೀವನ ತತ್ತರಿಸಿದೆ. ಜನರ ರಕ್ಷಣಾ ಕಾರ್ಯವೂ ನಡೆಯುತ್ತಿದೆ. ದೃಷ್ಟಿ ಹಾಯಿಸಿದ ಕಡೆಯೆಲ್ಲ ನೀರೇ ಕಾಣುತ್ತಿದ್ದು, ಅದರ ಫೋಟೋ ಝಲಕ್ ನೀವಿಲ್ಲಿ ಕಾಣಹುದಾಗಿದೆ.